ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ| ಅರಿಯಬೇಕಿದೆ ಸೀಟ್‌ ಬೆಲ್ಟ್‌ ಮಹತ್ವ

Last Updated 7 ಸೆಪ್ಟೆಂಬರ್ 2022, 19:31 IST
ಅಕ್ಷರ ಗಾತ್ರ

ಉದ್ಯಮಿ ಸೈರಸ್ ಮಿಸ್ತ್ರಿ ಅವರ ಸಾವಿಗೆ ಕಾರಣವಾದ ರಸ್ತೆ ಅಪಘಾತವು ಸೀಟ್ ಬೆಲ್ಟ್ ಮಹತ್ವದ ಬಗ್ಗೆ ಬೆಳಕು ಚೆಲ್ಲಿದೆ. ಹಿಂಬದಿ ಪ್ರಯಾಣಿಕರಿಗೂ ಸೀಟ್ ಬೆಲ್ಟ್ ಕಡ್ಡಾಯ, ಇಲ್ಲದಿದ್ದರೆ ದಂಡ ವಿಧಿಸಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವರು ಹೇಳಿದ್ದಾರೆ. ಜನರ ಸುರಕ್ಷತೆಗೆ ಈ ಕ್ರಮ ಅತ್ಯಗತ್ಯ. ದಿನನಿತ್ಯ ದೇಶದಾದ್ಯಂತ ನೂರಾರು ಮಂದಿ ರಸ್ತೆ ಅಪಘಾತಗಳಲ್ಲಿ ಮೃತಪಡುತ್ತಿದ್ದಾರೆ. ಇವರಲ್ಲಿ, ಅಪಘಾತವಾದಾಗ ಸೀಟ್ ಬೆಲ್ಟ್ ಹಾಕಿಕೊಳ್ಳದೇ ಇದ್ದ ಕಾರಣಕ್ಕೆ ಪ್ರಾಣ ಕಳೆದುಕೊಂಡಿರುವವರೂ ಬಹಳಷ್ಟು ಜನ ಇರುತ್ತಾರೆ. ಈಗ ಖ್ಯಾತನಾಮರೊಬ್ಬರ ಸಾವು ಸೀಟ್ ಬೆಲ್ಟ್‌ನ ಮಹತ್ವವನ್ನು ಮುನ್ನೆಲೆಗೆ ತಂದಿದೆ. ಈ ಅಪಘಾತದಿಂದ ಹೆದ್ದಾರಿಯ ವಿನ್ಯಾಸದೋಷ, ರಸ್ತೆಗಳ ಅಸಮರ್ಪಕ ನಿರ್ವಹಣೆಯಂತಹ ವಿಷಯಗಳ ಬಗ್ಗೆಯೂ ಗಮನ ಹರಿಯುವಂತಾದರೆ ಒಳ್ಳೆಯದು.

– ಎ.ಜೆ.ಜಾವಿದ್,ಹಾಸನ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT