ಟಿ. ನರಸೀಪುರದಲ್ಲಿ ನಡೆದ ಚಿರತೆ ದಾಳಿಯಲ್ಲಿ ಪುಟ್ಟ ಹುಡುಗನೊಬ್ಬ ಸಾವಿಗೀಡಾಗಿರುವುದು ನೋವಿನ ಸಂಗತಿ. ಇತ್ತೀಚೆಗೆ ರಾಜ್ಯದ ಕೆಲವು ಕಡೆ ಚಿರತೆಗಳು ಕಾಡನ್ನು ಬಿಟ್ಟು ನಾಡಿಗೆ ಬರುತ್ತಿವೆ. ಆಗಾಗ ಮನುಷ್ಯರ ಮೇಲೆ ದಾಳಿ ನಡೆಸುತ್ತಲೇ ಇವೆ. ಮೂರು ತಿಂಗಳಲ್ಲಿ ಒಟ್ಟು ನಾಲ್ಕು ಸಾವುಗಳು ಚಿರತೆಗಳಿಂದಾಗಿ ಸಂಭವಿಸಿವೆ. ಚಿರತೆಗಳು ನಾಡಿಗೆ ಬರಲು ಕಾರಣ ಕಾಡಿನ ನಾಶವೇ ಆಗಿದೆ. ಕಾಡಿನಲ್ಲಿ ಜಾಗವಿಲ್ಲದೆ ಅವು ನಾಡಿಗೆ ಬರುತ್ತಿವೆ.