‘ಬಿಜೆಪಿ ಸರ್ಕಾರದ ದುರಾಡಳಿತವನ್ನು ಕಾಂಗ್ರೆಸ್ ನಾಯಕರು ಟೀಕೆ ಮಾಡುತ್ತಿದ್ದಾರೆ. ಆದರೆ ಇಂತಹ ಸರ್ಕಾರ ಬರಲು ಕಾರಣರಾದವರು ಆತ್ಮಾವಲೋಕನ ಮಾಡಿಕೊಳ್ಳಬೇಕು’ ಎಂದಿದ್ದಾರೆ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ (ಪ್ರ.ವಾ., ಜ. 24). ಐದು ವರ್ಷಗಳ ಹಿಂದೆ ಬಿಜೆಪಿ ಅಧಿಕಾರಕ್ಕೆ ಬರಬಾರದೆಂದೇ ಕಾಂಗ್ರೆಸ್ ಪಕ್ಷವು ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿತು. ಆದರೆ ನಂತರದ ಬೆಳವಣಿಗೆಯಲ್ಲಿ, ಕಾಂಗ್ರೆಸ್ ಮತ್ತು ಜೆಡಿಎಸ್ನ ಕೆಲವು ಶಾಸಕರು ಬಿಜೆಪಿ ಜೊತೆ ಕೈಜೋಡಿಸಿ ಕುಮಾರಸ್ವಾಮಿ ನೇತೃತ್ವದ ಸರ್ಕಾರವನ್ನು ಪದಚ್ಯುತ ಗೊಳಿಸಿದರು. ಇದು ಈಚಿನ ಇತಿಹಾಸ. ಆದರೆ ಅದಕ್ಕೂ ಹಿಂದೆ ತಮ್ಮ ಪಕ್ಷದ ಜಾತ್ಯತೀತ ಮೌಲ್ಯವನ್ನೇ ಹಾಸ್ಯಾಸ್ಪದ ರೀತಿಯಲ್ಲಿ ಕಡೆಗಣಿಸಿ, ಬಿಜೆಪಿ ಜೊತೆಗೆ ಹೋದವರು ಕುಮಾರಸ್ವಾಮಿಯವರೇ ಅಲ್ಲವೆ?!