ಇದನ್ನೇ ನೆಪವಾಗಿಸಿಕೊಂಡು ಮಹಾರಾಷ್ಟ್ರ ಮತ್ತು ತೆಲಂಗಾಣ ಪೊಲೀಸರು ಅವರ ಮನೆಯ ಮೇಲೆ ದಾಳಿ ಮಾಡಿರುವುದು ಖಂಡನೀಯ. ಇದು ದೇಶದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಜಾರಿಯಲ್ಲಿದೆ ಎಂಬುದನ್ನು ತೋರಿಸುತ್ತದೆ. ಸತ್ಯನಾರಾಯಣ ಅವರನ್ನು ಮಾನಸಿಕವಾಗಿ ಕುಗ್ಗಿಸುವುದು ಹಾಗೂ ಜನಪರವಾಗಿ ಯೋಚಿಸುವವರನ್ನು, ಪ್ರಜಾಪ್ರಭುತ್ವ ಮೌಲ್ಯಗಳನ್ನು ಜನರವರೆಗೆ ತಲುಪಿಸುವವರನ್ನು ಹೆದರಿಸುವುದು ಈ ಯೋಜಿತ ದಾಳಿಯ ಉದ್ದೇಶವಾಗಿದೆ. ಈ ರೀತಿಯ ದಾಳಿಗಳು ಪ್ರಜಾ
ಪ್ರಭುತ್ವ ಅಪಾಯದಲ್ಲಿದೆ ಎಂಬುದನ್ನು ಸೂಚಿಸುತ್ತವೆ. ಈ ಪೂರ್ವನಿಯೋಜಿತ ದಾಳಿಯನ್ನು ಪ್ರಜಾಪ್ರಭುತ್ವವಾದಿಗಳೆಲ್ಲ ಒಕ್ಕೊರಲಿನಿಂದ ಖಂಡಿಸಬೇಕು.