ಕಲಬುರ್ಗಿ: ಚಿಕ್ಕೋಡಿ ತಾಲ್ಲೂಕು ಬೇಡಕಿಹಾಳ ಗ್ರಾಮದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮರಾಠಿ ಭಾಷಿಕರ ಕ್ಷಮೆ ಕೇಳಿದ್ದು ಅಕ್ಷಮ್ಯ ಅಪರಾಧ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.
ನಗರದಲ್ಲಿ ಭಾನುವಾರ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಕ್ಷಮೆಯಾಚಿಸುವ ಮೂಲಕ ಕನ್ನಡಿಗರಿಗೆ ಅಪಮಾನ ಮಾಡಿದ್ದಾರೆ. ಆದ್ದರಿಂದ ಅವರು ಕನ್ನಡಿಗರ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.
ಮರಾಠಿಗರೂ ನಮ್ಮವರೆ. ಎಲ್ಲರೊಂದಿಗೆ ಬಾಂಧವ್ಯದಿಂದ ಇದ್ದಾರೆ. ಹಾಗಂತ ಮುಖ್ಯಮಂತ್ರಿ ಆದವರು ಕ್ಷಮೆ ಕೇಳುವುದು ಸರಿಯಲ್ಲ ಎಂದರು.
ಸಿದ್ದರಾಮಯ್ಯ ತಲೆ ತಿರುಕ. ಆತನಿಗೆ ತಲೆ ಸರಿ ಇಲ್ಲ. ತಲೆ ತಿರುಕರು ಇನ್ನೇನು ಮಾತನಾಡಲು ಸಾಧ್ಯ. ಸಿದ್ದರಾಮಯ್ಯ ಕಾಂಗ್ರೆಸ್ ಸರ್ಕಾರದ ಕೊನೆಯ ಮುಖ್ಯಮಂತ್ರಿ. ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.