ಬೆಂಗಳೂರು: ಕರ್ನಾಟಕ ವಿಧಾನಸಭೆಗೆ ಮತದಾನದ ಬೆನ್ನಲ್ಲೇ ಹೊರಬಿದ್ದ ಹೆಚ್ಚಿನ ಮತಗಟ್ಟೆಸಮೀಕ್ಷೆಗಳು ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಭವಿಷ್ಯ ನುಡಿದಿವೆ. ಈ ಬಗ್ಗೆ ಭಾನುವಾರ ಟ್ವೀಟ್ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತಗಟ್ಟೆ ಸಮೀಕ್ಷೆ ಎಂಬುದು ಎರಡು ದಿನಗಳ ಮನರಂಜನಾ ಕಾರ್ಯಕ್ರಮ. ಈ ಬಗ್ಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ, ನೀವು ನಿಮ್ಮ ವಾರಾಂತ್ಯವನ್ನು ಖುಷಿಯಾಗಿ ಕಳೆಯಿರಿ ಎಂದು ತಮ್ಮ ಕಾರ್ಯಕರ್ತರಿಗೆ ಹೇಳಿದ್ದಾರೆ.