ಸಾಮಾನ್ಯ ಜನರಿಗೆ ಬದುಕು ಬಹಳ ಮುಖ್ಯವಾಗಿರುತ್ತದೆ. ಅವರು ಬದುಕಿಗೆ ಹತ್ತಿರ (ಅನ್ನದ ಭಾಷೆ ) ಎಂದು ಇಂಗ್ಲಿಷ್ ಎಂಬ ಮಾಯಾಂಗನೆಯ ಬೆನ್ನುಬಿದ್ದಿದ್ದಾರೆ. ಇದಕ್ಕೆ ತುಪ್ಪ ಸುರಿದಂತೆ, ಬ್ಯಾಂಕಿಂಗ್, ಎಸ್ಎಸ್ಸಿ (ಸ್ಟಾಫ್ ಸೆಲೆಕ್ಷನ್ ಕಮಿಷನ್) ಮೊದಲಾದ ಕೇಂದ್ರೀಯ ನೇಮಕಾತಿ ಪರೀಕ್ಷೆಗಳನ್ನು ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮಾತ್ರ ನಡೆಸಲಾಗುತ್ತಿದೆ. ಇಂಥ ವಿಷಯಗಳಲ್ಲಿ ಸಾಹಿತಿಗಳ ದನಿ ಇಲ್ಲವೇ ಇಲ್ಲ. ಬದುಕಿಗೆ ಪೂರಕವಾದ ಇಂತಹ ಉಪಕ್ರಮಗಳ ಮೂಲಕ ಕನ್ನಡ ಭಾಷೆಯನ್ನು ಗಟ್ಟಿಗೊಳಿಸಬೇಕಾಗಿದೆ. ಭಾವನಾತ್ಮಕ ನೆಲೆಯಲ್ಲಿ ಮಾತುಗಳನ್ನು ಮುಂದುವರಿಸುತ್ತಾ ಹೋದರೆ ಭಾಷೆ ಕೃಶವಾಗುತ್ತಾ ಹೋಗುತ್ತದೆ. ಅಂತೆಯೇ ವ್ಯರ್ಥ ಪ್ರಲಾಪ ಮುಂದುವರೆಯುತ್ತದೆ ಅಷ್ಟೇ.