ಈ ಹಿನ್ನೆಲೆಯಲ್ಲಿ ನೋಡಿದರೆ, ಭೈರಪ್ಪನವರ ಸಲಹೆಯನ್ನು ಪರಿಗಣಿಸುವುದು ಎಷ್ಟು ಸೂಕ್ತ ಎಂಬುದನ್ನು ವಿಷಯ ತಜ್ಞರು, ಜನಪ್ರತಿನಿಧಿಗಳು ಹಾಗೂ ಬುದ್ಧಿಜೀವಿಗಳು ಚರ್ಚಿಸುವುದು ಒಳ್ಳೆಯದು. ಯಾವುದೇ ಕಾರಣಕ್ಕೂ ತಮಿಳುನಾಡು ಸರ್ಕಾರಕ್ಕೆ ಹಣಕ್ಕಾಗಿ ಕೋರಿಕೆ ಸಲ್ಲಿಸುವುದು ಬೇಡ, ಪ್ರಕೃತಿ ವಿಕೋಪಕ್ಕೆ ಪರಿಹಾರ ನೀಡುವುದು ಕೇಂದ್ರ ಸರ್ಕಾರದ ಜವಾಬ್ದಾರಿ. ನಿಯಮಾನುಸಾರ ಅದು ತನ್ನ ಕಾರ್ಯವನ್ನು ಮಾಡಬೇಕು. ಕೇಂದ್ರ ಸರ್ಕಾರಕ್ಕೆ ಪರಿಹಾರಕ್ಕಾಗಿ ಮನವಿ ಸಲ್ಲಿಸುವುದು ನಮ್ಮ ಹಕ್ಕು. ಅದನ್ನು ಮಾಡುವುದೇ ಸೂಕ್ತ. ಕೊಡಗಿನ ಪುನರ್ ನಿರ್ಮಾಣಕ್ಕಾಗಿ ಹಣ ಹೊಂದಿಸುವುದು ಕಾವೇರಿ ಕಣಿವೆಯ ಮಕ್ಕಳಿಗೆ ಕಷ್ಟದ ಕೆಲಸವೇನಲ್ಲ, ಆ ನಿಟ್ಟಿನಲ್ಲಿ ಯೋಜನೆ ಆಗಲಿ.