ದೆಹಲಿಯ ವಾಯುಮಾಲಿನ್ಯದ ಕುರಿತು ಹಾಲಿವುಡ್ ನಟ ಲಿಯೊನಾರ್ಡೊ ಡಿಕ್ಯಾಪ್ರಿಯೊ ಆತಂಕ ವ್ಯಕ್ತಪಡಿ ಸಿದ್ದಾರೆ (ಪ್ರ.ವಾ., ನ. 25). ದೂರದ ಯಾವುದೋ ದೇಶದಲ್ಲಿ ವೈಭವೋಪೇತ ಜೀವನ ನಡೆಸುತ್ತಿರುವ ನಟ ಹೀಗೆ ಅನ್ಯ ದೇಶದ ಪರಿಸರ, ಜನಸಾಮಾನ್ಯರ ಆರೋಗ್ಯದ ಬಗ್ಗೆ ಆತಂಕ- ಕಾಳಜಿ ತೋರುತ್ತಿದ್ದಾರೆ. ಆದರೆ, ಇಲ್ಲೇ ಇರುವ ಜನಪ್ರತಿನಿಧಿ ಗಳು, ಅಧಿಕಾರಿಗಳು ಇದರ ಬಗ್ಗೆ ಚಕಾರವೆತ್ತದೆ ಅಧಿಕಾರ, ಹಣಕ್ಕೆ ಪ್ರಾಮುಖ್ಯ ನೀಡುತ್ತಾ, ಜನರ ಆರೋಗ್ಯವನ್ನು ಕಡೆಗಣಿಸುತ್ತಿದ್ದಾರೆ. ಇನ್ನು ಸಮಾಜದಲ್ಲಿ ವೈಚಾರಿಕ, ವೈಜ್ಞಾನಿಕ ಮನೋಭಾವವನ್ನು ಬೆಳೆಸಬೇಕಾದ ಮಠಾಧೀಶರಲ್ಲಿ ಕೆಲವರು ಜನರ ದಾರಿ ತಪ್ಪಿಸಲು ಕ್ಷುಲ್ಲಕ ವಿಚಾರಗಳನ್ನು ಹರಿಬಿಡುತ್ತಿದ್ದಾರೆ.