ಹೊರದೇಶದಿಂದ ಬೆಂಗಳೂರಿಗೆ ಬಂದ ಕೆಲವರು ವೀಸಾ ಅವಧಿ ಮುಗಿದಿದ್ದರೂ ಇಲ್ಲಿಯೇ ನೆಲೆಸಿ, ಕಾನೂನು ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವುದು ಆಗಾಗ ಸುದ್ದಿಯಾಗುತ್ತಲೇ ಇರುತ್ತದೆ. ಇಂಥವರನ್ನು ನಿಯಂತ್ರಿಸಬೇಕಿದೆ. ಆದರೆ ಈಶಾನ್ಯ ರಾಜ್ಯಗಳ ಪರಿಸ್ಥಿತಿ ಇದಕ್ಕಿಂತ ಭಿನ್ನವಾಗಿದೆ. ಈ ರಾಜ್ಯಗಳು ತಮ್ಮ ಭಾಷೆ, ಸಂಸ್ಕೃತಿ ಹಾಗೂ ಜನಾಂಗೀಯ ಅಸ್ಮಿತೆಗಾಗಿ ಪ್ರತಿಭಟನೆಯಲ್ಲಿ ತೊಡಗಿವೆ. ಆದ್ದರಿಂದ ಕೇಂದ್ರ ಸರ್ಕಾರವು ಮಸೂದೆಯ ಸಾಧಕ- ಬಾಧಕಗಳನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕು.