ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೌರತ್ವ ಕಾಯ್ದೆ ಚರ್ಚೆಗೆ ಒಳಪಡಲಿ

Last Updated 15 ಡಿಸೆಂಬರ್ 2019, 20:01 IST
ಅಕ್ಷರ ಗಾತ್ರ

ಪೌರತ್ವ (ತಿದ್ದುಪಡಿ) ಕಾಯ್ದೆಯ ಬಗೆಗೆ ದೇಶದಾದ್ಯಂತ ಪರ ಮತ್ತು ವಿರೋಧದ ಚರ್ಚೆಯಾಗುತ್ತಿದ್ದು, ಈಶಾನ್ಯ ರಾಜ್ಯಗಳಲ್ಲಿ ಕಾಯ್ದೆಯನ್ನು ವಿರೋಧಿಸಿ ಪ್ರತಿಭಟನೆ ತೀವ್ರವಾಗಿದೆ. ದೇಶದ ಸಾರ್ವಭೌಮತ್ವ, ಸುರಕ್ಷೆಯ ದೃಷ್ಟಿಯಿಂದ ಮಹತ್ವವಾದ ಈ ಕಾಯ್ದೆಯು ರಾಷ್ಟ್ರವ್ಯಾಪಿ ಇನ್ನಷ್ಟು ಚರ್ಚೆಗೆ ಒಳಗಾಗಬೇಕಾಗಿದೆ.

ಹೊರದೇಶದಿಂದ ಬೆಂಗಳೂರಿಗೆ ಬಂದ ಕೆಲವರು ವೀಸಾ ಅವಧಿ ಮುಗಿದಿದ್ದರೂ ಇಲ್ಲಿಯೇ ನೆಲೆಸಿ, ಕಾನೂನು ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವುದು ಆಗಾಗ ಸುದ್ದಿಯಾಗುತ್ತಲೇ ಇರುತ್ತದೆ. ಇಂಥವರನ್ನು ನಿಯಂತ್ರಿಸಬೇಕಿದೆ. ಆದರೆ ಈಶಾನ್ಯ ರಾಜ್ಯಗಳ ಪರಿಸ್ಥಿತಿ ಇದಕ್ಕಿಂತ ಭಿನ್ನವಾಗಿದೆ. ಈ ರಾಜ್ಯಗಳು ತಮ್ಮ ಭಾಷೆ, ಸಂಸ್ಕೃತಿ ಹಾಗೂ ಜನಾಂಗೀಯ ಅಸ್ಮಿತೆಗಾಗಿ ಪ್ರತಿಭಟನೆಯಲ್ಲಿ ತೊಡಗಿವೆ. ಆದ್ದರಿಂದ ಕೇಂದ್ರ ಸರ್ಕಾರವು ಮಸೂದೆಯ ಸಾಧಕ- ಬಾಧಕಗಳನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕು.

ರುದ್ರೇಶ್ ಅದರಂಗಿ, ಬೆಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT