ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿ ತಿಳಿದಾಗ, ಹಿಂದೆ ಆರೋಪಗಳ ಹಿನ್ನೆಲೆಯಲ್ಲಿ ಹೈಕಮಾಂಡ್ ಕೇಳಿದಾಗಲೂ ‘ಒಳ್ಳೆಯ ದಿನ’ದವರೆಗೆ ಕಾಲ ತಳ್ಳಿದ್ದುದು, ಸಂಖ್ಯಾಬಲ ಇಲ್ಲದಾಗಲೂ ಆರು ದಿನದ ಮುಖ್ಯಮಂತ್ರಿ ಆಗಿದ್ದುದು ಎಲ್ಲ ನೆನಪಾಯಿತು. ಮುಂದಿನ ಮುಖ್ಯಮಂತ್ರಿ ಯಾರು ಎನ್ನುವುದಕ್ಕಿಂತ ಯಡಿಯೂರಪ್ಪನವರು ತಮ್ಮ ನಾಲ್ಕು ದಶಕಗಳ ರಾಜಕಾರಣದಲ್ಲಿ ಹೊಸ ರಾಜಕೀಯ ಸಂಸ್ಕೃತಿಯನ್ನು ತರಲು ಯತ್ನಿಸಿದರೇ ಎಂಬ ಪ್ರಶ್ನೆ ಹೆಚ್ಚು ಮುಖ್ಯ, ಪ್ರಸ್ತುತ.