<p>ರಾಜ್ಯದಲ್ಲಿ ಕೋವಿಡ್ ಮೊದಲ ಮತ್ತು ಎರಡನೇ ಅಲೆಯಿಂದ ಅಪಾರ ಪ್ರಮಾಣದಲ್ಲಿ ಸಾವು-ನೋವು ಸಂಭವಿಸಿವೆ. ಲಾಕ್ಡೌನ್ ಪರಿಣಾಮವಾಗಿ ಲಕ್ಷಾಂತರ ಜನ ನಿರುದ್ಯೋಗಿಗಳಾಗಿದ್ದಾರೆ. ಬಹುತೇಕರು ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಅತಿವೃಷ್ಟಿಯಿಂದ ಬದುಕು ಅತಂತ್ರವಾಗಿದೆ. ಇಂಥ ಸಂದರ್ಭದಲ್ಲಿ ಆಡಳಿತಾರೂಢ ಬಿಜೆಪಿ ವರಿಷ್ಠರು, ರಾಜ್ಯದಲ್ಲಿ ಮುಖ್ಯಮಂತ್ರಿಯನ್ನು ಬದಲಿಸುತ್ತಿರುವುದು ಸರಿಯಲ್ಲ.</p>.<p>ರಾಜ್ಯವನ್ನು ಸರಿದಾರಿಯಲ್ಲಿ ಮುನ್ನಡೆಸುವ ಹೊಣೆಗಾರಿಕೆ ಮುಖ್ಯಮಂತ್ರಿಯದ್ದಾಗಿರುತ್ತದೆ. ಭಾರತವು ಒಕ್ಕೂಟ ಗಣತಂತ್ರವಾಗಿದ್ದು, ರಾಜ್ಯಗಳು ಕೇಂದ್ರದ ಅಡಿಯಾಳಲ್ಲ ಎಂಬುದನ್ನು ಸಂವಿಧಾನದಲ್ಲಿಯೇ ಉಲ್ಲೇಖಿಸಲಾಗಿದೆ. ಜನರಿಂದ ಚುನಾಯಿತರಾಗಿರುವ, ಶಾಸಕಾಂಗವು ಶಾಸನಬದ್ಧವಾಗಿ ಆಯ್ಕೆ ಮಾಡಿರುವ ಮುಖ್ಯಮಂತ್ರಿಯನ್ನು ಸಂವಿಧಾನಾತ್ಮಕವಾಗಿ ತೆಗೆದುಹಾಕುವ ಹಕ್ಕು ಆಯಾ ಪಕ್ಷದ ಶಾಸಕರಿಗಿರುತ್ತದೆ. ಆದರೆ ಹೈಕಮಾಂಡ್ ಗದಾಪ್ರಹಾರ ಮಾಡಿರುವುದು ಸಂವಿಧಾನದ ಆಶಯಕ್ಕೆ ವ್ಯತಿರಿಕ್ತವಾದುದು. ಇದು ರಾಷ್ಟ್ರೀಯ ಪಕ್ಷಕ್ಕೆ ಶೋಭೆ ತರುವುದಿಲ್ಲ</p>.<p><strong>- ರುದ್ರೇಶ್ ಅದರಂಗಿ,ಬೆಂಗಳೂರು</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಜ್ಯದಲ್ಲಿ ಕೋವಿಡ್ ಮೊದಲ ಮತ್ತು ಎರಡನೇ ಅಲೆಯಿಂದ ಅಪಾರ ಪ್ರಮಾಣದಲ್ಲಿ ಸಾವು-ನೋವು ಸಂಭವಿಸಿವೆ. ಲಾಕ್ಡೌನ್ ಪರಿಣಾಮವಾಗಿ ಲಕ್ಷಾಂತರ ಜನ ನಿರುದ್ಯೋಗಿಗಳಾಗಿದ್ದಾರೆ. ಬಹುತೇಕರು ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಅತಿವೃಷ್ಟಿಯಿಂದ ಬದುಕು ಅತಂತ್ರವಾಗಿದೆ. ಇಂಥ ಸಂದರ್ಭದಲ್ಲಿ ಆಡಳಿತಾರೂಢ ಬಿಜೆಪಿ ವರಿಷ್ಠರು, ರಾಜ್ಯದಲ್ಲಿ ಮುಖ್ಯಮಂತ್ರಿಯನ್ನು ಬದಲಿಸುತ್ತಿರುವುದು ಸರಿಯಲ್ಲ.</p>.<p>ರಾಜ್ಯವನ್ನು ಸರಿದಾರಿಯಲ್ಲಿ ಮುನ್ನಡೆಸುವ ಹೊಣೆಗಾರಿಕೆ ಮುಖ್ಯಮಂತ್ರಿಯದ್ದಾಗಿರುತ್ತದೆ. ಭಾರತವು ಒಕ್ಕೂಟ ಗಣತಂತ್ರವಾಗಿದ್ದು, ರಾಜ್ಯಗಳು ಕೇಂದ್ರದ ಅಡಿಯಾಳಲ್ಲ ಎಂಬುದನ್ನು ಸಂವಿಧಾನದಲ್ಲಿಯೇ ಉಲ್ಲೇಖಿಸಲಾಗಿದೆ. ಜನರಿಂದ ಚುನಾಯಿತರಾಗಿರುವ, ಶಾಸಕಾಂಗವು ಶಾಸನಬದ್ಧವಾಗಿ ಆಯ್ಕೆ ಮಾಡಿರುವ ಮುಖ್ಯಮಂತ್ರಿಯನ್ನು ಸಂವಿಧಾನಾತ್ಮಕವಾಗಿ ತೆಗೆದುಹಾಕುವ ಹಕ್ಕು ಆಯಾ ಪಕ್ಷದ ಶಾಸಕರಿಗಿರುತ್ತದೆ. ಆದರೆ ಹೈಕಮಾಂಡ್ ಗದಾಪ್ರಹಾರ ಮಾಡಿರುವುದು ಸಂವಿಧಾನದ ಆಶಯಕ್ಕೆ ವ್ಯತಿರಿಕ್ತವಾದುದು. ಇದು ರಾಷ್ಟ್ರೀಯ ಪಕ್ಷಕ್ಕೆ ಶೋಭೆ ತರುವುದಿಲ್ಲ</p>.<p><strong>- ರುದ್ರೇಶ್ ಅದರಂಗಿ,ಬೆಂಗಳೂರು</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>