ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶ್ರೀಸಾಮಾನ್ಯರಿಗೆ ಅನುಕೂಲಕರವಾದ ವಿಧವಾ ಮತ್ತು ಅಂಗವಿಕಲರ ಮಾಸಾಶನದ ಮೊತ್ತವನ್ನು ಹೆಚ್ಚಿಸಿರುವುದು ಶ್ಲಾಘನೀಯ. ಆದರೆ ಈ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳು ಪಡುವ ಯಾತನೆಯ ನಿಯಂತ್ರಣಕ್ಕೂ ಸರ್ಕಾರ ಕ್ರಮ ಕೈಗೊಳ್ಳಬೇಕಿದೆ. ಇದಕ್ಕಾಗಿ ಅವರು ಕನಿಷ್ಠ 4-5 ಸಾವಿರ ರೂಪಾಯಿ ಖರ್ಚು ಮಾಡಬೇಕಾದ ಪರಿಸ್ಥಿತಿ ಇದೆ.