ಬೇಲೂರು ತಾಲ್ಲೂಕಿನ ಚೌಡನಹಳ್ಳಿಯಲ್ಲಿ 38 ಮಂಗಗಳ ಮೃತದೇಹಗಳು ಮೂಟೆಯಲ್ಲಿ ಕಂಡುಬಂದಿರುವುದನ್ನು ತಿಳಿದು ಮನಕಲಕಿತು. ಈ ಸಾವಿಗೆ ಕಾರಣವನ್ನು ಪತ್ತೆ ಹಚ್ಚಿ, ಇದಕ್ಕೆ ಕಾರಣರಾದವರಿಗೆ ಕಠಿಣ ಶಿಕ್ಷೆಯಾಗಲಿ. ಗಿಡ ಮರ, ಪ್ರಾಣಿ ಪಕ್ಷಿಗಳ ನಾಶದಿಂದ ಪರಿಸರದಲ್ಲಿ ಅಸಮತೋಲನ ಉಂಟಾಗಿ ಪ್ರಾಕೃತಿಕ ಅವಘಡಗಳು ಸಂಭವಿಸುತ್ತಿವೆ. ಹೀಗಿದ್ದರೂ ಪರಿಸರದ ಮೇಲಿನ ದೌರ್ಜನ್ಯವನ್ನು ಹೀಗೇ ಮುಂದುವರಿಸಿದರೆ, ಮುಂದೊಂದು ದಿನ ಮಾನವ ಜನಾಂಗ ದೊಡ್ಡ ಬೆಲೆ ತೆರಬೇಕಾದೀತು.