ಶ್ರೀರಂಗಪಟ್ಟಣದ ಡಿವೈಎಸ್ಪಿ ಯೋಗೇಂದ್ರನಾಥ್ ಅವರು ಆತ್ಮಹತ್ಯೆಗೆ ಯತ್ನಿಸಿರುವುದು ವರದಿಯಾಗಿದೆ (ಪ್ರ.ವಾ., ಅ.14). ಶಾಸಕ ಪರಮೇಶ್ವರ ಅವರ ಆಪ್ತ ಸಹಾಯಕ ರಮೇಶ್, ಎಸ್.ಎಂ.ಕೃಷ್ಣ ಅವರ ಅಳಿಯ ‘ಕಾಫಿ ಡೇ’ ಸಿದ್ಧಾರ್ಥ, ಡಿವೈಎಸ್ಪಿಯಾಗಿದ್ದ ಕೊಡಗಿನ ಗಣಪತಿ ಭಟ್, ಜಿಲ್ಲಾಧಿಕಾರಿಯಾಗಿದ್ದ ಡಿ.ಕೆ.ರವಿ ಮುಂತಾದವರು ಆತ್ಮಹತ್ಯೆಗೆ ಶರಣಾದರು. ಯಾವುದೇ ಸಮಸ್ಯೆಗೂ ಪರಿಹಾರ ಇದ್ದೇ ಇರುತ್ತದೆ, ಅಲ್ಲಿಯವರೆಗೂ ತಾಳ್ಮೆ ಇರಬೇಕು. ಇಂದು ಅನೇಕರು ಸಣ್ಣಪುಟ್ಟ ಕಾರಣ ಗಳಿಗೂ ಆತ್ಮಹತ್ಯೆ ಮಾಡಿಕೊಳ್ಳುವ ಮನಃಸ್ಥಿತಿಗೆ ಒಳಗಾಗುತ್ತಿರುವುದು ನೋವಿನ ಸಂಗತಿ.