ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ| ಮತಬ್ಯಾಂಕ್ ಆಗದಿರಲಿ

Last Updated 18 ಮೇ 2020, 19:45 IST
ಅಕ್ಷರ ಗಾತ್ರ

ಆರ್ಥಿಕ ಸಂಕಷ್ಟದಲ್ಲಿರುವ ವಿವಿಧ ವಲಯಗಳ ಜನರಿಗೆ ಸರ್ಕಾರ ಸಹಾಯಧನ ಘೋಷಿಸಿದೆ. ಆದರೆ ಅರ್ಹರು ಈ ಸಂಬಂಧ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ. ಆದಷ್ಟು ಬೇಗ ಅರ್ಜಿ ಸಲ್ಲಿಸಲು ಅನುವು ಮಾಡಿಕೊಡಬೇಕು. ಏಕೆಂದರೆ ಲಾಕ್‍ಡೌನ್ ಮುಗಿದ ಬಳಿಕ ಗ್ರಾಮ ಪಂಚಾಯಿತಿ ಚುನಾವಣೆ ದಿನಾಂಕ ಘೋಷಣೆಯಾಗುತ್ತದೆ. ಆದ್ದರಿಂದ, ಚುನಾವಣೆ ದಿನಾಂಕ ಪ್ರಕಟವಾಗುವ ಮುಂಚಿತವಾಗಿಯೇ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಬೇಕಾಗಿದೆ.

ಆನಂತರ ಸರ್ಕಾರವು ಸಹಾಯಧನ ನೀಡಲು ಮುಂದಾದರೆ, ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾಗುತ್ತದೆ. ಜೊತೆಗೆ ಈ ವರ್ಗದ ಜನರ ವೋಟ್ ಬ್ಯಾಂಕ್ ಆಗಿಯೂ ಸಹಾಯಧನವನ್ನು ಬಳಸಿಕೊಂಡಂತೆ ಆಗುತ್ತದೆ.

-ಶಿವಶಂಕರ ಎಸ್.,ಮುತ್ತರಾಯನಹಳ್ಳಿ,ಮಧುಗಿರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT