ಆರ್ಥಿಕ ಸಂಕಷ್ಟದಲ್ಲಿರುವ ವಿವಿಧ ವಲಯಗಳ ಜನರಿಗೆ ಸರ್ಕಾರ ಸಹಾಯಧನ ಘೋಷಿಸಿದೆ. ಆದರೆ ಅರ್ಹರು ಈ ಸಂಬಂಧ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ. ಆದಷ್ಟು ಬೇಗ ಅರ್ಜಿ ಸಲ್ಲಿಸಲು ಅನುವು ಮಾಡಿಕೊಡಬೇಕು. ಏಕೆಂದರೆ ಲಾಕ್ಡೌನ್ ಮುಗಿದ ಬಳಿಕ ಗ್ರಾಮ ಪಂಚಾಯಿತಿ ಚುನಾವಣೆ ದಿನಾಂಕ ಘೋಷಣೆಯಾಗುತ್ತದೆ. ಆದ್ದರಿಂದ, ಚುನಾವಣೆ ದಿನಾಂಕ ಪ್ರಕಟವಾಗುವ ಮುಂಚಿತವಾಗಿಯೇ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಬೇಕಾಗಿದೆ.