ರೈತರ ಬದುಕು ಬಹಳ ಕಷ್ಟದಲ್ಲಿದೆ ಎಂಬುದು ರಾಜಕಾರಣಿಗಳಿಗೂ ತುಂಬಾ ಚೆನ್ನಾಗಿಯೇ ತಿಳಿದಿದೆ. ಆದರೆ ಅವರು ಚುನಾವಣೆ ನಂತರ ಸಮಸ್ಯೆ ಪರಿಹಾರಕ್ಕೆ ಕೈಗೊಳ್ಳುವ ಕ್ರಮಗಳು ಎರಡೇ. ಅವೆಂದರೆ, ಬಿಡಿಗಾಸಿನ ಪರಿಹಾರ ಹಾಗೂ ಸಾಲ ಮನ್ನಾ. ಜವಾಬ್ದಾರಿಯುತ ನಾಗರಿಕರಾದ ನಾವು ಸರ್ಕಾರಗಳಿಗೆ ಪಕ್ಷಾತೀತವಾಗಿ ಕೆಳಗಿನ ಪ್ರಶ್ನೆಗಳನ್ನು ಕೇಳಲೇಬೇಕಿದೆ. ಗ್ರಾಮೀಣ ರಸ್ತೆಗಳನ್ನು, ನೀರಾವರಿ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವುದು ಯಾವಾಗ? ಕೋಲ್ಡ್ ಸ್ಟೋರೇಜ್ಗಳನ್ನು ಅಭಿವೃದ್ಧಿಪಡಿಸುವುದು ಎಂದು? ಗ್ರಾಮೀಣ ಕೃಷಿ ಉದ್ಯೋಗಗಳನ್ನು ಹೆಚ್ಚಿಸಲು ಸರ್ಕಾರಗಳು ಏಕೆ ಮುಂದಾಗುತ್ತಿಲ್ಲ? ಇವನ್ನೆಲ್ಲಾ ನಾವು ಪ್ರಶ್ನಿಸದೇ ಇದ್ದರೆ ರೈತರ ಸಮಸ್ಯೆಗಳು ದ್ವಿಗುಣಗೊಳ್ಳುತ್ತವೆ ಹೊರತು ಕೃಷಿ ಕ್ಷೇತ್ರದ ಅಭಿವೃದ್ಧಿ ಅಸಾಧ್ಯ.