ರಾಜ್ಯದ ಜನ ತಮಗೆ ಇಷ್ಟವಾದ ಪಕ್ಷಕ್ಕೆ ಅಧಿಕಾರ ನೀಡಲು ಪ್ರಜಾತಂತ್ರ ವ್ಯವಸ್ಥೆಯಲ್ಲಿ ಅವಕಾಶವಿದೆ. ಬೇರೆ ಪಕ್ಷಗಳು ಅಧಿಕಾರಕ್ಕೆ ಬರುವುದನ್ನು ತಡೆಯುವ ಹಕ್ಕು ಮತದಾರರಿಗೆ ಮಾತ್ರವಲ್ಲದೆ ಬೇರೆಯವರಿಗೆ ಇಲ್ಲ. ಅವರು ತಮ್ಮ ಪಕ್ಷದ ಪರವಾಗಿ ಪ್ರಚಾರ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರಲಿ, ಅದು ಬೇರೆ ಮಾತು. ಆದರೆ ಬೇರೆ ಪಕ್ಷಗಳು ಅಧಿಕಾರಕ್ಕೆ ಬರುವುದು ಬೇಡ ಎನ್ನುವುದು ಉದ್ಧಟತನದ ಮಾತು.
–ಕೆ.ವಿ.ವಾಸು,ಮೈಸೂರು