ಮಹಾರಾಷ್ಟ್ರದಲ್ಲಿ ಶನಿವಾರ ದಿಢೀರನೆ ಸರ್ಕಾರ ರಚಿಸುವ ಮೂಲಕ ಬಿಜೆಪಿಯು ತಂತ್ರಗಾರಿಕೆಯಲ್ಲಿ ತಾನು ಮುಂದು ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಸುಮಾರು ಒಂದು ತಿಂಗಳಿನಿಂದ ರಾಜ್ಯದಲ್ಲಿ ಸರ್ಕಾರ ರಚನೆಗೆ ಸಂಬಂಧಿಸಿದಂತೆ ನಡೆಯುತ್ತಿದ್ದ ಹಗ್ಗಜಗ್ಗಾಟಕ್ಕೆ ಶನಿವಾರ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಮುಖ್ಯಮಂತ್ರಿ ಆಗುವ ಮೂಲಕ ತೆರೆ ಬೀಳಲಿದೆ ಎಂಬ ನಿರೀಕ್ಷೆ ಹುಸಿಯಾಗಿ, ಬಿಜೆಪಿ ನಾಯಕ ದೇವೇಂದ್ರ ಫಡಣವೀಸ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು ಅಭಿನಂದನಾರ್ಹ.