ರಾಷ್ಟ್ರಪತಿ ಆಡಳಿತ ಹಿಂಪಡೆಯುವ ಮುಂಚೆ ಸಂಸತ್ತಿನ ಅನುಮತಿ ಪಡೆಯಬೇಕು. ಆದರೆ, ತುರ್ತು ಸಂದರ್ಭದಲ್ಲಿ ಬಳಸಬಹುದಾದ ಪ್ರಧಾನಿಯವರ ಅಧಿಕಾರ ಬಳಸಿ ರಾಷ್ಟ್ರಪತಿ ಅಂಕಿತ ಹಾಕಿಸಿರುವ ಸರ್ಕಾರದ ನಡೆ ಸರಿಯಲ್ಲ. ಬಿಜೆಪಿಗೆ ಅಗತ್ಯ ಬೆಂಬಲವಿದ್ದರೆ ಸರ್ಕಾರ ರಚಿಸಲು ಯಾರದ್ದೂ ತಕರಾರು ಇರಲಿಲ್ಲ. ಆದರೆ, ಮಹಾರಾಷ್ಟ್ರದಲ್ಲಿ ಸಿನಿಮೀಯ ರೀತಿಯಲ್ಲಿ ಸರ್ಕಾರ ರಚಿಸುವ ಅಗತ್ಯವಾದರೂ ಏನಿತ್ತು? ಕೇಂದ್ರ ಸರ್ಕಾರ ಆತ್ಮವಿಮರ್ಶೆ ಮಾಡಿಕೊಳ್ಳಲಿ.