ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಗೈ ಹುಣ್ಣಿಗೆ...

Last Updated 23 ಡಿಸೆಂಬರ್ 2019, 20:00 IST
ಅಕ್ಷರ ಗಾತ್ರ

‘ದೇಶದ ಅನೇಕ ನಗರಗಳಲ್ಲಿ ವಿಷಪೂರಿತ ಗಾಳಿಯ ಮಟ್ಟವು ಹೆಚ್ಚಾಗಿದ್ದು, ಶೀಘ್ರವೇ ವಾಯುಮಾಲಿನ್ಯ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದಲ್ಲಿ ಜನರ ಜೀವಿತಾವಧಿ ಮತ್ತು ಆರೋಗ್ಯದ ಮೇಲೆ ಭಾರಿ ದುಷ್ಪರಿಣಾಮವಾಗಲಿದೆ’ ಎಂದು ವಿಶ್ವ ಆರೋಗ್ಯ ಸಂಸ್ಥೆಯ ನಿರ್ದೇಶಕಿ ಮಾರಿಯಾ ನೀರಾ ಹೇಳಿದ್ದಾರೆ. ಇತ್ತ ಕೇಂದ್ರ ಪರಿಸರ ಸಚಿವರು ‘ವಾಯುಮಾಲಿನ್ಯದಿಂದ ಜನರ ಜೀವಿತಾವಧಿ
ಯಲ್ಲಿ ಬದಲಾವಣೆ ಆಗುತ್ತದೆ ಎಂಬುದಕ್ಕೆ ಭಾರತದಲ್ಲಿ ಅಧ್ಯಯನಗಳು ನಡೆದಿಲ್ಲ’ ಎಂದಿದ್ದಾರೆ.

ವಾಯುಮಾಲಿನ್ಯದಿಂದ ಜನರು ಗಂಭೀರ ತೊಂದರೆಗಳಿಗೆ ಈಡಾಗುತ್ತಿರುವುದು ಸಚಿವರಿಗೆ ತಿಳಿದಿಲ್ಲವೇ? ವಾಯುಮಾಲಿನ್ಯ ನಿಯಂತ್ರಿಸಲು ಸಚಿವರು ಪರಿಶ್ರಮ ಪಡಬೇಕೇ ಹೊರತು ವಿಶ್ವ ಆರೋಗ್ಯ ಸಂಸ್ಥೆಯ ವರದಿಯನ್ನು ಟೀಕಿಸುವುದಲ್ಲ. ಅಂಗೈ ಹುಣ್ಣಿಗೆ ಕನ್ನಡಿಹಿಡಿದಂತೆ, ವಾಯುಮಾಲಿನ್ಯದಿಂದ ಜನರ ಆರೋಗ್ಯ ಹಾಳಾಗುತ್ತಿರುವುದಕ್ಕೆ ಇನ್ನೂ ಅಧ್ಯಯನಗಳು ಬೇಕೆ?

ಮಹೇಶ್ವರ ಹುರುಕಡ್ಲಿ, ಬಾಚಿಗೊಂಡನಹಳ್ಳಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT