ವರಮಾನದ ಲೆಕ್ಕಾಚಾರವೇ ಮುಖ್ಯವಾಗದಿರಲಿ
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಕಚ್ಚಾ ತೈಲದ ಬೆಲೆ ಏರಿಳಿತಕ್ಕೆ ಸಂಬಂಧವೇ ಇಲ್ಲದ ರೀತಿಯಲ್ಲಿ ನಮ್ಮಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ನಿರಂತರವಾಗಿ ಏರುತ್ತಲೇ ಇರುವುದು ಖಂಡನೀಯ. ಜೊತೆಗೆ ವಿವಿಧ ಬಗೆಯ ಉಪಕರಗಳ ಹೊರೆ ಬೇರೆ. ಕೋವಿಡ್ ಸಂಕಷ್ಟದ ಈ ಕಾಲದಲ್ಲೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮ್ಮ ವರಮಾನದ ಬಗ್ಗೆಯೇ ಲೆಕ್ಕಾಚಾರ ಹಾಕುತ್ತಿರುವುದು ದುರದೃಷ್ಟವೇ ಸರಿ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಇಳಿಸಿ, ನಾಗರಿಕರ ಮೇಲೆ ಬೀಳುವ ಹೊರೆಯನ್ನು ತಗ್ಗಿಸಬೇಕಾಗಿದೆ.
- ವಿಜಯಕುಮಾರ್ ಎಚ್.ಕೆ., ರಾಯಚೂರು
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.