ಸ್ಥಳೀಯ ಸಂಸ್ಥೆಗಳಿಗೆ ಕಾಲಕಾಲಕ್ಕೆ ಚುನಾವಣೆಯನ್ನು ನಡೆಸಬೇಕು ಎಂದು ನ್ಯಾಯಾಲಯಗಳು ಪದೇ ಪದೇ ಹೇಳಿವೆ. ಆದರೆ ಅದು ಪಾಲನೆಯಾಗುತ್ತಿಲ್ಲ. ವಾರ್ಡ್ಗಳ ಪರಿಷ್ಕರಣೆ, ಮೀಸಲಾತಿಯಂತಹ ನೆವಗಳನ್ನು ಮುಂದಿಟ್ಟು ಚುನಾವಣೆ ಮುಂದೂಡುವುದು ಅಧಿಕಾರಸ್ಥರ ಚಾಳಿ. ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವುದು ಶಾಸಕರಿಗೆ ಬೇಕಾಗಿಲ್ಲ. ಅವರ ತಾಳಕ್ಕೆ ತಕ್ಕಂತೆ ಸರ್ಕಾರ ಕುಣಿಯುತ್ತದೆ. ರಾಜಕಾರಣದಲ್ಲಿ ಸೋಲು–ಗೆಲುವು ಇದ್ದೇ ಇದೆ. ಅದನ್ನು ಬಂದಂತೆ ಸ್ವೀಕರಿಸುವ ಪ್ರಬುದ್ಧತೆಯನ್ನು ರಾಜಕೀಯ ಪಕ್ಷಗಳು ಬೆಳೆಸಿಕೊಳ್ಳಬೇಕು. ಬಿಬಿಎಂಪಿಗೆ ತ್ವರಿತವಾಗಿ ಚುನಾವಣೆ ನಡೆಸಲು ಸರ್ಕಾರ ಬದ್ಧತೆ ತೋರಲಿ.