ರಾಷ್ಟ್ರಪತಿ ಅವರು ಮೈಸೂರಿಗೆ ಬಂದು ನಾಡಹಬ್ಬ ದಸರಾವನ್ನು ಉದ್ಘಾಟಿಸಿದರು. ಈ ಸಮಾರಂಭದ ವೇದಿಕೆಯಲ್ಲಿ ಹಾಕಿದ್ದ ಬ್ಯಾನರ್ ಸಂಪೂರ್ಣವಾಗಿ ಇಂಗ್ಲಿಷ್ನಲ್ಲಿತ್ತು. ನಾಡಹಬ್ಬದಲ್ಲಿ ನಾಡಿನ ನುಡಿಗೆ ಜಾಗವಿಲ್ಲದ ಮೇಲೆ ಅಂತಹ ನಾಡಹಬ್ಬಕ್ಕೆ ಅರ್ಥವಿದೆಯೇ?
ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರವು ಮಸೂದೆ ಮಂಡಿಸಿದೆ. ಕನ್ನಡ ಭಾಷೆ ಬಳಕೆ ವಿಚಾರದಲ್ಲಿ ನಿಯಮ ಉಲ್ಲಂಘನೆಗೆ ದಂಡ ವಿಧಿಸಲು ಮುಂದಾಗಿದೆ. ಆದರೆ ಸರ್ಕಾರದ ನೇತೃತ್ವದಲ್ಲಿ ನಡೆಯುವ ಕಾರ್ಯಕ್ರಮದಲ್ಲೇ ಹೀಗೆ ಕನ್ನಡವನ್ನು ಕಡೆಗಣಿಸುವುದು ಸರಿಯೇ?