<p>ಭೂಪರಿವರ್ತನೆ ತಿದ್ದುಪಡಿ ಮಸೂದೆಯನ್ನು ಸುಗ್ರೀವಾಜ್ಞೆಯ ಮೂಲಕ ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದು ಕಂದಾಯ ಸಚಿವರು ಹೇಳಿದ್ದಾರೆ. ತಿದ್ದುಪಡಿಯ ಅಗತ್ಯವೂ ಇದೆ. ಆದರೆ ಮಸೂದೆಯು ವಿಧಾನಮಂಡಲದಲ್ಲಿ ವಿಸ್ತೃತವಾಗಿ ಚರ್ಚೆಗೆ ಒಳಗಾಗಿದ್ದರೆ ಅದರ ಸಾಧಕ–ಬಾಧಕಗಳು ಬೆಳಕು ಕಾಣುತ್ತಿದ್ದವು. ಸುಗ್ರೀವಾಜ್ಞೆಯು ತುರ್ತು ಸಂದರ್ಭಗಳಿಗಷ್ಟೇ ಸೀಮಿತ ಆಗಿರಬೇಕು.</p>.<p>ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತನೆ ಮಾಡಿಸಿಕೊಳ್ಳಲು ಅರ್ಜಿ ನೀಡಿದ ಏಳು ದಿನಗಳಲ್ಲಿ ಅದನ್ನು ಇತ್ಯರ್ಥಗೊಳಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ. ಉದ್ದೇಶ ಒಳ್ಳೆಯದು. ಅದನ್ನು ಸಾಕಾರಗೊಳಿಸುವ ಇಚ್ಛಾಶಕ್ತಿ ಸರ್ಕಾರಕ್ಕೆ ಇರಬೇಕು. ಇಲ್ಲದೇ ಹೋದರೆ ಬರೀ ಆದರ್ಶದ ಒಣಮಾತಾಗಿ ಮಾತ್ರ ಉಳಿಯುತ್ತದೆ.</p>.<p>⇒ನಾಗರಾಜು ಎನ್.ಎಂ.,ದಾವಣಗೆರೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಭೂಪರಿವರ್ತನೆ ತಿದ್ದುಪಡಿ ಮಸೂದೆಯನ್ನು ಸುಗ್ರೀವಾಜ್ಞೆಯ ಮೂಲಕ ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದು ಕಂದಾಯ ಸಚಿವರು ಹೇಳಿದ್ದಾರೆ. ತಿದ್ದುಪಡಿಯ ಅಗತ್ಯವೂ ಇದೆ. ಆದರೆ ಮಸೂದೆಯು ವಿಧಾನಮಂಡಲದಲ್ಲಿ ವಿಸ್ತೃತವಾಗಿ ಚರ್ಚೆಗೆ ಒಳಗಾಗಿದ್ದರೆ ಅದರ ಸಾಧಕ–ಬಾಧಕಗಳು ಬೆಳಕು ಕಾಣುತ್ತಿದ್ದವು. ಸುಗ್ರೀವಾಜ್ಞೆಯು ತುರ್ತು ಸಂದರ್ಭಗಳಿಗಷ್ಟೇ ಸೀಮಿತ ಆಗಿರಬೇಕು.</p>.<p>ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತನೆ ಮಾಡಿಸಿಕೊಳ್ಳಲು ಅರ್ಜಿ ನೀಡಿದ ಏಳು ದಿನಗಳಲ್ಲಿ ಅದನ್ನು ಇತ್ಯರ್ಥಗೊಳಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ. ಉದ್ದೇಶ ಒಳ್ಳೆಯದು. ಅದನ್ನು ಸಾಕಾರಗೊಳಿಸುವ ಇಚ್ಛಾಶಕ್ತಿ ಸರ್ಕಾರಕ್ಕೆ ಇರಬೇಕು. ಇಲ್ಲದೇ ಹೋದರೆ ಬರೀ ಆದರ್ಶದ ಒಣಮಾತಾಗಿ ಮಾತ್ರ ಉಳಿಯುತ್ತದೆ.</p>.<p>⇒ನಾಗರಾಜು ಎನ್.ಎಂ.,ದಾವಣಗೆರೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>