ಕೊರೊನಾ ಮಹಾಮಾರಿಯ ಕಾರಣದಿಂದಾಗಿ ಸಣ್ಣ, ಮಧ್ಯಮ ಹಾಗೂ ಪ್ರತಿಷ್ಠಿತ ದೊಡ್ಡ ಐಟಿ-ಬಿಟಿ ಕಂಪನಿಗಳು ತಮ್ಮೆಲ್ಲಾ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವ ಅವಕಾಶವನ್ನು ಒದಗಿಸಿಕೊಟ್ಟು ಒಂದೂವರೆ ವರ್ಷವೇ ಕಳೆದಿದೆ. ಪ್ರಸ್ತುತ ದಿನಗಳಲ್ಲಿ ಕೊರೊನಾ ಸೋಂಕು ಹರಡುವಿಕೆ ಕ್ಷೀಣಿಸುತ್ತಿರುವ ಹಾಗೂ ಅನೇಕ ಮಂದಿ ಲಸಿಕೆಯನ್ನು ತೆಗೆದುಕೊಂಡಿರುವ ಕಾರಣದಿಂದ ಬಹುತೇಕ ಕಂಪನಿಗಳು ಕಚೇರಿಯಿಂದ ಕೆಲಸ ಮಾಡಲು ಉದ್ಯೋಗಿಗಳನ್ನು ಕರೆಸಿಕೊಳ್ಳಲು ಮುಂದಾಗಿವೆ. ಆದರೆ, ಕೊರೊನಾದ ಮೂರನೇ ಅಲೆಯ ನಿರೀಕ್ಷೆ ಇದ್ದು, ಇಂತಹ ಸಂದರ್ಭದಲ್ಲಿ ಮನೆಯಿಂದಲೇ ಸುಸೂತ್ರವಾಗಿ ಕೆಲಸ ನಡೆಯುತ್ತಿರುವಾಗ ಅನವಶ್ಯಕವಾಗಿ ಉದ್ಯೋಗಿ ಗಳನ್ನು ಕರೆಸಿಕೊಳ್ಳಲು ಮುಂದಾಗುವುದು ಎಷ್ಟು ಸರಿ? ಈ ನಿರ್ಧಾರವು ಕೊರೊನಾ ಹರಡುವಿಕೆಗೆ ಕಾರಣ
ವಾಗಬಹುದೇನೊ. ಅಷ್ಟೇ ಅಲ್ಲದೆ ಹಲವರು ವಿವಿಧ ಪ್ರದೇಶಗಳಿಂದ ಬೆಂಗಳೂರಿಗೆ ಬರುವುದರಿಂದ ಜನದಟ್ಟಣೆ, ವಾಯುಮಾಲಿನ್ಯ, ಸಂಚಾರ ದಟ್ಟಣೆಯಂತಹ ಹಲವಾರು ಸಮಸ್ಯೆಗಳು ತಲೆದೋರುತ್ತವೆ. ಈಗಾಗಲೇ ದೆಹಲಿಯಲ್ಲಿ ಜನದಟ್ಟಣೆ, ವಾಯುಮಾಲಿನ್ಯದ ಪರಿಣಾಮವನ್ನು ಕಾಣುತ್ತಿದ್ದೇವೆ.