ಕೋವಿಡ್ ಎರಡನೇ ಅಲೆಯ ಹೊಡೆತದಿಂದ ಇಡೀ ರಾಜ್ಯ ತಲ್ಲಣಗೊಂಡಿರುವ ಹೊತ್ತಿನಲ್ಲಿ ಮಂಗಳವಾರ ಮಧ್ಯಾಹ್ನ ಮಾಧ್ಯಮಗಳು ಬಿತ್ತರಿಸಿದ ಸುದ್ದಿ ಅತ್ಯಂತ ಆಘಾತಕಾರಿಯಾಗಿತ್ತು. ಸಂಸದ ತೇಜಸ್ವಿ ಸೂರ್ಯ ಮತ್ತು ಅವರ ತಂಡ ‘ಬೆಡ್ ಬ್ಲಾಕಿಂಗ್’ನಂತಹ ಭ್ರಷ್ಟಾಚಾರದ ಕರಾಳ ಮುಖವನ್ನು ಬಯಲಿಗೆ ತಂದಿದೆ. ಬೆಂಗಳೂರಿನಲ್ಲಿ ಹೆಚ್ಚಿನ ಮನೆಗಳು ಸೋಂಕಿತರಿಂದ, ಸಾವು– ನೋವಿನಿಂದ ತುಂಬಿರುವ ಹೊತ್ತಿನಲ್ಲಿ ಬಿಬಿಎಂಪಿ ಸಿಬ್ಬಂದಿ ‘ಉರಿಯುತ್ತಿರುವ ಮನೆಯ ಗಳ ಹಿರಿಯುವ ಕೆಲಸ’ ಮಾಡಿರುವುದು ಅತ್ಯಂತ ಅಮಾನವೀಯ.