ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ: ಬಸ್‌ಪಾಸ್‌ ಬಗ್ಗೆಯೂ ಗಮನವಿರಲಿ

Last Updated 26 ಆಗಸ್ಟ್ 2021, 22:00 IST
ಅಕ್ಷರ ಗಾತ್ರ

ಕೋವಿಡ್ ಮೂರನೇ ಅಲೆಯ ಭೀತಿಯ ನಡುವೆಯೂ ಸರ್ಕಾರ ಶಾಲಾ ಕಾಲೇಜು ಆರಂಭಿಸಿರುವುದು ಸ್ವಾಗತಾರ್ಹ. ಇದರಿಂದ ಆನ್‌ಲೈನ್‌ ಪಾಠದ ಸಂದರ್ಭದಲ್ಲಿ ಎದುರಾಗುತ್ತಿದ್ದ ಅನೇಕ ಸಮಸ್ಯೆಗಳಿಂದ ತಾತ್ಕಾಲಿಕ ಮುಕ್ತಿ ದೊರೆತಂತಾಗಿದೆ. ಆದರೆ ಹಳ್ಳಿಗಳಿಂದ ಸಮೀಪದ ನಗರ, ಪಟ್ಟಣದ ಶಾಲೆಗಳಿಗೆ ಹೋಗಲು ಮಕ್ಕಳು, ಸರ್ಕಾರ ನೀಡುವ ರಿಯಾಯಿತಿ ದರದ ಪಾಸನ್ನೇ ಅವಲಂಬಿಸಿದ್ದಾರೆ. ಶಾಲೆ ಪ್ರಾರಂಭಿಸಿರುವ ಸರ್ಕಾರ, ಬಸ್‌ಪಾಸ್‌ಗೆ ಸಂಬಂಧಿಸಿದಂತೆ ಇದುವರೆಗೂ ಯಾವುದೇ ಸ್ಪಷ್ಟ ಕ್ರಮ ತೆಗೆದುಕೊಂಡಿಲ್ಲ. ಕೋವಿಡ್‌ನಿಂದ ಆಥಿ೯ಕ ಸಂಕಷ್ಟ ಎದುರಿಸುತ್ತಿರುವ ಪಾಲಕರಿಗೆ ಮಕ್ಕಳ ಪ್ರಯಾಣ ವೆಚ್ಚವನ್ನು ಭರಿಸಲಾಗುತ್ತಿಲ್ಲ. ಹೀಗಾಗಿ ಸಾರಿಗೆ ಸಚಿವರು ಸೂಕ್ತ ಕ್ರಮ ಕೈಗೊಂಡು, ಸುಗಮ ಶೈಕ್ಷಣಿಕ ಚಟುವಟಿಕೆಗೆ ಅವಕಾಶ ಮಾಡಿಕೊಡಲಿ.

ರೇಣುಕಾ ಬಿ. ಗೊಡಚಿ,ಧಾರವಾಡ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT