ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು 2013-14ನೇ ಸಾಲಿನಿಂದ 2016-17ರವರೆಗೆ ಮಾನ್ಯತೆ ಕಳೆದುಕೊಂಡ ಸಮಯದಲ್ಲಿ, ಸಾವಿರಾರು ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸಿ ವಿವಿಧ ಸ್ನಾತಕ, ಸ್ನಾತಕೋತ್ತರ ಪದವಿಗಳನ್ನು ನೀಡಿರುವುದು ಸರಿಯಷ್ಟೆ. ಪದವಿ ಗಳಿಸಿರುವ ಈ ಸಾಲಿನ ವಿದ್ಯಾರ್ಥಿಗಳಿಗೆ ಅನ್ಯಾಯವಾಗಬಾರದೆಂದು ಹೈಕೋರ್ಟ್, ಪದವಿಗಳನ್ನು ಮಾನ್ಯ ಮಾಡಿ ತೀರ್ಪು ನೀಡಿದ ಬಳಿಕ ಈ ಬಗ್ಗೆ ರಾಜ್ಯ ಸರ್ಕಾರವು ಆದೇಶವನ್ನು ಹೊರಡಿಸಿತು.