ವಿರೋಧ ಪಕ್ಷಗಳು ತಮ್ಮ ಕರ್ತವ್ಯವನ್ನು ಮಾಡುತ್ತಿವೆ. ಸಚಿವರ ಈಗಿನ ಹೇಳಿಕೆಯು ಸರ್ಕಾರವನ್ನು ಯಾರೂ ಪ್ರಶ್ನಿಸಬಾರದು ಎಂದು ಹೇಳಿದಂತಿದೆ. ಸಾವಿರಾರು ಹೆಣ್ಣುಮಕ್ಕಳು ಎಲ್ಲಾ ಕ್ಷೇತ್ರಗಳಲ್ಲಿ ಪುರುಷರಿಗೆ ಸರಿಸಮಾನರಾಗಿ ದುಡಿಯುತ್ತಿದ್ದಾರೆ. ತಪ್ಪಿತಸ್ಥರು ಎಷ್ಟೇ ಬಲಾಢ್ಯರಾದರೂ ಸರಿ ಅವರನ್ನು ಬಂಧಿಸಿ, ಹೆಣ್ಣುಮಕ್ಕಳು ಮುಕ್ತವಾಗಿ ಓಡಾಡುವಂತೆ ರಕ್ಷಣೆ ಕೊಡಿ.