ಚಾಮರಾಜನಗರ ಜಿಲ್ಲೆಯಲ್ಲಿ ಆಮ್ಲಜನಕದ ಕೊರತೆಯಿಂದ ಒಂದೇ ದಿನ 24 ಮಂದಿ ಮೃತಪಟ್ಟಿರುವುದು ಅತ್ಯಂತ ದುರದೃಷ್ಟಕರ ಮತ್ತು ಶೋಚನೀಯ ಸಂಗತಿ. ‘ರಾಜ್ಯದಲ್ಲಿ ಉತ್ಪಾದನೆಯಾಗುತ್ತಿರುವ ಅಷ್ಟೂ ಆಮ್ಲಜನಕವನ್ನು ಸ್ಥಳೀಯವಾಗಿ ಬಳಸಲು ಕೇಂದ್ರ ಸರ್ಕಾರ ಅನುಮತಿ ನೀಡಿದರೆ ತಕ್ಷಣ ಬಿಕ್ಕಟ್ಟಿನಿಂದ ಪಾರಾಗಲು ಸಾಧ್ಯ’ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಹೇಳಿದ್ದಾರೆ. ಆಮ್ಲಜನಕದ ಕೊರತೆಯಿಂದ ನೂರಾರು ಕೋವಿಡ್ ರೋಗಿಗಳು ಉಸಿರುಗಟ್ಟಿ ಸಾಯುತ್ತಿರುವಾಗ, ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಅನುಮತಿಗೆ ಕಾಯದೆ ಕೂಡಲೇ ಆಮ್ಲಜನಕವನ್ನು ರೋಗಿಗಳಿಗೆ ಸರಬರಾಜು ಮಾಡಿ ಸಾವು-ನೋವುಗಳನ್ನು ತಪ್ಪಿಸಬೇಕು.