ಯುವಜನರಿಗೆ ಸ್ಫೂರ್ತಿಯಾಗಿದ್ದ ಪುನೀತ್ ರಾಜ್ಕುಮಾರ್ ಭೌತಿಕವಾಗಿ ಕಣ್ಮರೆಯಾಗಿದ್ದಾರೆ. ಆದರೆ ತಮ್ಮ ಸಮಾಜಮುಖಿ ಕೆಲಸಗಳಿಂದ, ಅಭಿನಯ, ನೃತ್ಯ, ಗಾಯನ, ವ್ಯಾಯಾಮ, ಸಿನಿಮಾ ನಿರ್ಮಾಣ, ಆಹಾರಸೇವನೆಯ ಶಿಸ್ತಿನಿಂದಾಗಿ ಕೋಟ್ಯಂತರ ಯುವಕರ ಪಾಲಿನ ಆದರ್ಶವಾಗಿದ್ದಾರೆ. ಅನಾಥಾಶ್ರಮ, ವೃದ್ಧಾಶ್ರಮ, ಶಾಲಾ ಮಕ್ಕಳ ವಿದ್ಯಾಭ್ಯಾಸದ ಜವಾಬ್ದಾರಿಯನ್ನು ಹೊತ್ತು ಮತ್ತು ಸರ್ಕಾರದ ಸುಧಾರಣಾ ಕಾರ್ಯಕ್ರಮಗಳ ರಾಯಭಾರಿಯಾಗಿ ಆಡಳಿತ ವ್ಯವಸ್ಥೆಗೆ ಬಲ ತುಂಬಿದ್ದರು.