<p>‘ನಾವು ಕಟ್ಟಬೇಕಾಗಿರುವುದು ಶಾಲೆ-ಕಾಲೇಜು, ಆಸ್ಪತ್ರೆಗಳನ್ನೇ ಹೊರತು ದೇವಾಲಯ, ಚರ್ಚು, ಮಸೀದಿ<br />ಗಳನ್ನಲ್ಲ’ ಎಂಬ ಡಾ. ಬಿ.ಆರ್.ಅಂಬೇಡ್ಕರ್ ಅವರ ಮಾತು ತುಂಬಾ ಅರ್ಥಗರ್ಭಿತವಾದದ್ದು. ಪ್ರಸ್ತುತ ಸಂದಿಗ್ಧ ಪರಿಸ್ಥಿತಿಯಲ್ಲಿ ಕೋವಿಡ್ ರೋಗಿಗಳು ಆಸ್ಪತ್ರೆಗಳಲ್ಲಿ ಬೆಡ್ ಸಿಗದೆ, ಆಕ್ಸಿಜನ್ ಸಿಗದೆ ಪ್ರಾಣ ಬಿಡುತ್ತಿರುವುದನ್ನು ನೋಡಿದರೆ, ಈ ಮಾತು ಈಗಲೂ ಎಷ್ಟು ಪ್ರಸ್ತುತ ಮತ್ತು ಮಹತ್ವದ್ದಾಗಿದೆ ಎಂಬುದು ತಿಳಿಯುತ್ತದೆ.</p>.<p>ಏಕೆಂದರೆ ಇಂದಿಗೂ ನಮ್ಮ ಜನಪ್ರತಿನಿಧಿಗಳು ತಮ್ಮ ಸ್ವಾರ್ಥಕ್ಕಾಗಿ ಜಾತಿ-ಧರ್ಮಗಳ ಬೆನ್ನು ಹತ್ತಿ, ಕೋಟಿ ಕೋಟಿ ಹಣ ಖರ್ಚು ಮಾಡಿ ದೇವಾಲಯ, ಮಂದಿರ, ಚರ್ಚು, ಮಸೀದಿಗಳನ್ನೇ ನಿರ್ಮಾಣ ಮಾಡುತ್ತಿದ್ದಾರೆ. ಆದರೆ ಸುಸಜ್ಜಿತ ಶಾಲೆ-ಕಾಲೇಜು, ಆಸ್ಪತ್ರೆಗಳ ಕೊರತೆ ಕಂಡುಬರುತ್ತಿದೆ. ಇದು ನಮ್ಮ ದೇಶದ ಇಂದಿನ ದುಃಸ್ಥಿತಿಗೆ ಹಿಡಿದ ಕೈಗನ್ನಡಿಯಾಗಿದೆ. ಈಗಲಾದರೂ ನಮ್ಮ ಸರ್ಕಾರ ಮತ್ತು ರಾಜಕಾರಣಿಗಳು ಅಂಬೇಡ್ಕರ್ ಅವರ ಈ ಮಾತನ್ನು ಗಂಭೀರವಾಗಿ ಪರಿಗಣಿಸಿ, ಜನಸಂಖ್ಯೆಗೆ ಅನುಗುಣವಾಗಿ ವೈದ್ಯಕೀಯ ಮತ್ತು ಶಾಲಾ ಕಾಲೇಜು ಸೌಲಭ್ಯ ಒದಗಿಸಬೇಕು.</p>.<p><strong>ಸದಾಶಿವ ಎಂ. ಮುರಗೋಡ, ರಾಮದುರ್ಗ, ಬೆಳಗಾವಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>‘ನಾವು ಕಟ್ಟಬೇಕಾಗಿರುವುದು ಶಾಲೆ-ಕಾಲೇಜು, ಆಸ್ಪತ್ರೆಗಳನ್ನೇ ಹೊರತು ದೇವಾಲಯ, ಚರ್ಚು, ಮಸೀದಿ<br />ಗಳನ್ನಲ್ಲ’ ಎಂಬ ಡಾ. ಬಿ.ಆರ್.ಅಂಬೇಡ್ಕರ್ ಅವರ ಮಾತು ತುಂಬಾ ಅರ್ಥಗರ್ಭಿತವಾದದ್ದು. ಪ್ರಸ್ತುತ ಸಂದಿಗ್ಧ ಪರಿಸ್ಥಿತಿಯಲ್ಲಿ ಕೋವಿಡ್ ರೋಗಿಗಳು ಆಸ್ಪತ್ರೆಗಳಲ್ಲಿ ಬೆಡ್ ಸಿಗದೆ, ಆಕ್ಸಿಜನ್ ಸಿಗದೆ ಪ್ರಾಣ ಬಿಡುತ್ತಿರುವುದನ್ನು ನೋಡಿದರೆ, ಈ ಮಾತು ಈಗಲೂ ಎಷ್ಟು ಪ್ರಸ್ತುತ ಮತ್ತು ಮಹತ್ವದ್ದಾಗಿದೆ ಎಂಬುದು ತಿಳಿಯುತ್ತದೆ.</p>.<p>ಏಕೆಂದರೆ ಇಂದಿಗೂ ನಮ್ಮ ಜನಪ್ರತಿನಿಧಿಗಳು ತಮ್ಮ ಸ್ವಾರ್ಥಕ್ಕಾಗಿ ಜಾತಿ-ಧರ್ಮಗಳ ಬೆನ್ನು ಹತ್ತಿ, ಕೋಟಿ ಕೋಟಿ ಹಣ ಖರ್ಚು ಮಾಡಿ ದೇವಾಲಯ, ಮಂದಿರ, ಚರ್ಚು, ಮಸೀದಿಗಳನ್ನೇ ನಿರ್ಮಾಣ ಮಾಡುತ್ತಿದ್ದಾರೆ. ಆದರೆ ಸುಸಜ್ಜಿತ ಶಾಲೆ-ಕಾಲೇಜು, ಆಸ್ಪತ್ರೆಗಳ ಕೊರತೆ ಕಂಡುಬರುತ್ತಿದೆ. ಇದು ನಮ್ಮ ದೇಶದ ಇಂದಿನ ದುಃಸ್ಥಿತಿಗೆ ಹಿಡಿದ ಕೈಗನ್ನಡಿಯಾಗಿದೆ. ಈಗಲಾದರೂ ನಮ್ಮ ಸರ್ಕಾರ ಮತ್ತು ರಾಜಕಾರಣಿಗಳು ಅಂಬೇಡ್ಕರ್ ಅವರ ಈ ಮಾತನ್ನು ಗಂಭೀರವಾಗಿ ಪರಿಗಣಿಸಿ, ಜನಸಂಖ್ಯೆಗೆ ಅನುಗುಣವಾಗಿ ವೈದ್ಯಕೀಯ ಮತ್ತು ಶಾಲಾ ಕಾಲೇಜು ಸೌಲಭ್ಯ ಒದಗಿಸಬೇಕು.</p>.<p><strong>ಸದಾಶಿವ ಎಂ. ಮುರಗೋಡ, ರಾಮದುರ್ಗ, ಬೆಳಗಾವಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>