ಏಕೆಂದರೆ ಇಂದಿಗೂ ನಮ್ಮ ಜನಪ್ರತಿನಿಧಿಗಳು ತಮ್ಮ ಸ್ವಾರ್ಥಕ್ಕಾಗಿ ಜಾತಿ-ಧರ್ಮಗಳ ಬೆನ್ನು ಹತ್ತಿ, ಕೋಟಿ ಕೋಟಿ ಹಣ ಖರ್ಚು ಮಾಡಿ ದೇವಾಲಯ, ಮಂದಿರ, ಚರ್ಚು, ಮಸೀದಿಗಳನ್ನೇ ನಿರ್ಮಾಣ ಮಾಡುತ್ತಿದ್ದಾರೆ. ಆದರೆ ಸುಸಜ್ಜಿತ ಶಾಲೆ-ಕಾಲೇಜು, ಆಸ್ಪತ್ರೆಗಳ ಕೊರತೆ ಕಂಡುಬರುತ್ತಿದೆ. ಇದು ನಮ್ಮ ದೇಶದ ಇಂದಿನ ದುಃಸ್ಥಿತಿಗೆ ಹಿಡಿದ ಕೈಗನ್ನಡಿಯಾಗಿದೆ. ಈಗಲಾದರೂ ನಮ್ಮ ಸರ್ಕಾರ ಮತ್ತು ರಾಜಕಾರಣಿಗಳು ಅಂಬೇಡ್ಕರ್ ಅವರ ಈ ಮಾತನ್ನು ಗಂಭೀರವಾಗಿ ಪರಿಗಣಿಸಿ, ಜನಸಂಖ್ಯೆಗೆ ಅನುಗುಣವಾಗಿ ವೈದ್ಯಕೀಯ ಮತ್ತು ಶಾಲಾ ಕಾಲೇಜು ಸೌಲಭ್ಯ ಒದಗಿಸಬೇಕು.