ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಚುನಾವಣೋತ್ತರ ಹಿಂಸಾಚಾರ ಅತ್ಯಂತ ಖಂಡನೀಯ. ದೇಶ ಈಗ ಕೊರೊನಾ ಸೋಂಕಿನ ದಾಳಿಯಿಂದ ಹೈರಾಣಾಗಿದೆ. ಪಶ್ಚಿಮ ಬಂಗಾಳದಲ್ಲಿ ಅಸ್ತಿತ್ವಕ್ಕೆ ಬಂದಿರುವ ಮಮತಾ ಬ್ಯಾನರ್ಜಿ ಅವರ ನೇತೃತ್ವದಲ್ಲಿನ ಹೊಸ ಸರ್ಕಾರ ದ್ವೇಷ ಭಾವನೆ ತೊರೆದು, ಈ ಸಂಕಷ್ಟದ ಸಂದರ್ಭದಲ್ಲಿ ಶಾಂತಿ ಕಾಪಾಡಲು ತುರ್ತು ಕ್ರಮ ತೆಗೆದುಕೊಳ್ಳಬೇಕು. ಈ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಗೊಳಿಸಿ ಜನರ ಮನಸ್ಸನ್ನು ಗೆಲ್ಲಬೇಕು.