ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ | ಮಾಲಿನ್ಯ ತಪ್ಪಿಸಿ, ಹೃದ್ರೋಗ ನಿಯಂತ್ರಿಸಿ

Last Updated 30 ಸೆಪ್ಟೆಂಬರ್ 2022, 19:31 IST
ಅಕ್ಷರ ಗಾತ್ರ

ಹೃದ್ರೋಗಿಗಳ ಸಂಖ್ಯೆ ಹೆಚ್ಚುತ್ತಿರುವುದರ ಬಗ್ಗೆ ವಿಶ್ವ ಹೃದಯ ದಿನದ (ಸೆ. 29) ಸಂದರ್ಭದಲ್ಲಿ ವೈದ್ಯರು ತಿಳಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹೃದಯ ತಜ್ಞರು ಹೃದಯಾಘಾತಕ್ಕೆ ನೀಡುವ ಕಾರಣಗಳಲ್ಲಿ ಅನಾರೋಗ್ಯಕರ ಆಹಾರ ಪದ್ಧತಿ, ಜೀವನಶೈಲಿ, ಮದ್ಯಪಾನ, ಧೂಮಪಾನ, ಮಾನಸಿಕ ಒತ್ತಡ ಮತ್ತು ಪರಿಸರ ಮಾಲಿನ್ಯ ಮುಖ್ಯವಾದವು. ಇವುಗಳಲ್ಲಿ ಪರಿಸರ ಮಾಲಿನ್ಯ ಹೊರತುಪಡಿಸಿದರೆ, ಉಳಿದ ಎಲ್ಲ ಕಾರಣಗಳಿಗೆ ಒಬ್ಬ ವ್ಯಕ್ತಿಯ ವೈಯಕ್ತಿಕ ಜೀವನಶೈಲಿ ಕಾರಣವಾಗಬಹುದು. ಆದರೆ ಪರಿಸರ ಮಾಲಿನ್ಯಕ್ಕೆ ನಮ್ಮ ಆಡಳಿತ ಕಾರಣವಾಗುತ್ತದೆ. ಸ್ವಚ್ಛ, ಸುಂದರ, ಪ್ರಶಾಂತ ವಾತಾವರಣಕ್ಕೆ ಪೂರಕವಾದ ಕ್ರಮಗಳನ್ನು ಕೈಗೊಳ್ಳಬೇಕಾದುದು ಆಡಳಿತ ನಡೆಸುವವರ ಹೊಣೆ. ಯಾರೋ ಮಾಡುವ ತಪ್ಪಿಗೆ ಬೇರೆಯವರ ಜೀವ ಬಲಿಯಾಗುವುದನ್ನು ತಪ್ಪಿಸಬೇಕು.

⇒ಸುರೇಶ ಅರಳಿಮರ,ಬಾದಾಮಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT