ಕುಡಿತಕ್ಕೆ ಬಲಿಯಾಗಿ ನಾನಾ ತೊಂದರೆಗಳಿಂದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ, ಮದ್ಯಪಾನ ನಿಷೇಧದಿಂದ ಉಂಟಾಗುವ ವಿತ್ತೀಯ ಕೊರತೆಯನ್ನು ಗಮನಿಸದೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮದ್ಯಪಾನ ನಿಷೇಧ ಜಾರಿ ಮಾಡಬೇಕು. ಆಗ ಗಾಂಧಿಯವರ ಸಂಪೂರ್ಣ ಮದ್ಯಪಾನ ನಿಷೇಧದ ಕನಸನ್ನು ನನಸು ಮಾಡಿದಂತೆ ಆಗುತ್ತದೆ.