ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ: ಸ್ಥಳೀಯ ನಾಯಕರೇ ನಿರ್ವಹಿಸಲಿ

Last Updated 1 ಡಿಸೆಂಬರ್ 2020, 20:15 IST
ಅಕ್ಷರ ಗಾತ್ರ

ಉಪಚುನಾವಣೆ ಮತ್ತು ಸ್ಥಳೀಯ ಸಂಸ್ಥೆ ಚುನಾವಣೆಗಳ ಪ್ರಚಾರದಲ್ಲಿ ಸಾಮಾನ್ಯವಾಗಿ ರಾಷ್ಟ್ರೀಯ ರಾಜಕೀಯ ಪಕ್ಷಗಳ ಧುರೀಣರು ಪಾಲ್ಗೊಳ್ಳುವುದಿಲ್ಲ. ದೇಶದಲ್ಲಿ ಇದಕ್ಕೆ ದೀರ್ಘ ಇತಿಹಾಸ ಇದೆ. ಆದರೆ ಈ ಪರಂಪರೆಯನ್ನು ಬದಿಗೊತ್ತಿ, ಹೈದರಾಬಾದ್‌ ಮಹಾನಗರಪಾಲಿಕೆ ಚುನಾವಣಾ ಪ್ರಚಾರಕ್ಕೆ ರಾಷ್ಟ್ರೀಯ ಧುರೀಣರು ದೊಡ್ಡ ಸಂಖ್ಯೆಯಲ್ಲಿ ದಾಂಗುಡಿ ಇಟ್ಟಿದ್ದರು. ಇದರಿಂದ, ಈ ಚುನಾವಣೆಯ ಫಲಿತಾಂಶದ ಮೇಲೇ ಸರ್ಕಾರದ ಸ್ಥಿರತೆ ಮತ್ತು ದೇಶದ ಭವಿಷ್ಯ ಅಡಗಿದೆಯೆನೋ ಎನ್ನುವಂತಹ ಭಾವನೆ ಉಂಟಾಗಿದೆ.

ಸ್ಥಳೀಯ ಸಂಸ್ಥೆ ಚುನಾವಣೆಗಳು ಸ್ಥಳೀಯ ಸಮಸ್ಯೆಗಳ ಸುತ್ತ ಇರುವುದರಿಂದ ಇದರಲ್ಲಿ ರಾಷ್ಟ್ರೀಯ ನಾಯಕರು ಭಾಗವಹಿಸುವುದು ಸೂಕ್ತ ಎನಿಸುವುದಿಲ್ಲ. ಸ್ಥಳೀಯ ನಾಯಕರೇ ಇವುಗಳನ್ನು ನಿರ್ವಹಿಸುವುದು ಸಮಂಜಸ. ಚುನಾವಣಾ ವೆಚ್ಚ ಕಡಿತ ಮಾಡುವ ದೃಷ್ಟಿಯಿಂದಲೂ ಇದು ಸರಿಯಾದ ನಿಲುವು.

-ರಮಾನಂದ ಶರ್ಮಾ, ಬೆಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT