ಬೆಳೆದ ಬೆಳೆಗೆ ಮಾರುಕಟ್ಟೆಯಲ್ಲಿ ಸರಿಯಾದ ಬೆಲೆ ದೊರೆಯುತ್ತಿಲ್ಲ. ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ. ಸರ್ಕಾರ ಎಲ್ಲ ಜಿಲ್ಲೆಗಳನ್ನೂ ಗಣನೆಗೆ ತೆಗೆದುಕೊಂಡು ಆಯಾ ಜಿಲ್ಲೆಯ ಜಿಲ್ಲಾಧಿಕಾರಿ ಮುಖಾಂತರ ವಿವರ ಪಡೆದು ರೈತರ ಸಮಸ್ಯೆ ಬಗೆಹರಿಸಬೇಕು. ಎಲ್ಲರೂ ವಿಡಿಯೊ ಮಾಡಿ ಸಮಸ್ಯೆ ಹೇಳಿಕೊಳ್ಳುವುದಿಲ್ಲ ಅಲ್ಲವೇ? ಸರ್ಕಾರವೇ ನಿಗದಿತ ಬೆಲೆ ನೀಡಿ ಖರೀದಿಸಿದರೆ ಉತ್ತಮ.