ಕೋವಿಡ್ ಸಂಕಷ್ಟದ ಸಮಯದಲ್ಲಿ ಎಸ್ಎಸ್ಎಲ್ಸಿ ಮಕ್ಕಳಿಗಾಗಿ ರಾಜ್ಯದ ಹಲವು ಶೈಕ್ಷಣಿಕ ಜಿಲ್ಲೆಗಳಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳ ತಂಡ ಗೂಗಲ್ ಫಾರ್ಮ್ ಮೂಲಕ ವಿಷಯವಾರು ರಸಪ್ರಶ್ನೆಗಳನ್ನು ತಯಾರಿಸಿ, ವಿದ್ಯಾರ್ಥಿಗಳು ಉತ್ತರಿಸುವಂತೆ ಮಾಡುತ್ತಿರುವುದು ಉತ್ತಮ ಕ್ರಮ. ಆದರೆ ಎಲ್ಲ ವಿದ್ಯಾರ್ಥಿಗಳು ಇದರಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕೆಂದು ಶಿಕ್ಷಕರ ಮೇಲೆ ಒತ್ತಡ ಹೇರುತ್ತಿರುವುದು ಸರಿಯಲ್ಲ. ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಪೋಷಕರಲ್ಲಿ ಹೆಚ್ಚಿನವರ ಬಳಿ ಸ್ಮಾರ್ಟ್ ಫೋನ್ ಇರುವುದಿಲ್ಲ. ಒಂದು ವೇಳೆ ಇದ್ದರೂ ದುಡಿಮೆಯಿಲ್ಲದ ಕಾರಣ ಡೇಟಾ ಪ್ಯಾಕ್ ರಿಚಾರ್ಜ್ ಮಾಡಿಸುವಷ್ಟು ಹಣ ಹೊಂದಿರುವುದಿಲ್ಲ.