ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾಕಪ್‌ಡೆತ್‌: ಸ್ವಸ್ಥ ಸಮಾಜದ ಲಕ್ಷಣವಲ್ಲ

Last Updated 29 ಜೂನ್ 2020, 19:30 IST
ಅಕ್ಷರ ಗಾತ್ರ

ತಮಿಳುನಾಡಿನಲ್ಲಿ ಪೊಲೀಸ್‌ ವಶದಲ್ಲಿದ್ದಾಗಲೇ ತಂದೆ ಮತ್ತು ಮಗ ಮೃತರಾದ ಸುದ್ದಿ ಹೊರಬಿದ್ದ ಬೆನ್ನಿಗೇ ಮತ್ತೊಂದು ಕಸ್ಟಡಿ ಸಾವು ವರದಿಯಾಗಿರುವುದು ಅತ್ಯಂತ ನೋವಿನ ಸಂಗತಿ. ಸಮಾಜದ ರಕ್ಷಕರೇ ಇಂತಹ ಅಮಾನವೀಯ ಕೃತ್ಯಕ್ಕೆ ಕಾರಣರಾಗುವುದು ಸ್ವಸ್ಥ ಸಮಾಜದ ಲಕ್ಷಣವಲ್ಲ. ಮಾನವ ಹಕ್ಕಿನ ಉಲ್ಲಂಘನೆಯಂತಹ ಈ ಬಗೆಯ ಘಟನೆಗಳು ಪೊಲೀಸ್‌ ಇಲಾಖೆಯ ಗೌರವಕ್ಕೆ ಕುತ್ತು ತರುತ್ತವೆ. ಇಲಾಖೆ ಎಚ್ಚೆತ್ತುಕೊಳ್ಳಬೇಕು. ಇಲ್ಲವಾದರೆ ಅಮೆರಿಕದಲ್ಲಿ ನಡೆಯುತ್ತಿರುವಂತೆ ಪೊಲೀಸ್ ವಿರೋಧಿ ಹೋರಾಟಗಳು ಇಲ್ಲಿಯೂ ಹುಟ್ಟುವುದರಲ್ಲಿ ಅನುಮಾನವಿಲ್ಲ. ನಮ್ಮದು ಪ್ರಜಾಪ್ರಭುತ್ವ ರಾಷ್ಟ್ರವೇ ಹೊರತು ಪೊಲೀಸ್ ರಾಷ್ಟ್ರವಲ್ಲ ಎಂಬುದನ್ನು ನೆನಪಿನಲ್ಲಿಡುವುದು ಸೂಕ್ತ.

-ಶ್ವೇತಾ ಎನ್. ಸೊರಬ, ಶಿವಮೊಗ್ಗ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT