<p>ಅಪರಾಧ ಹಿನ್ನೆಲೆಯ ಸಂಸದೆಯೊಬ್ಬರನ್ನು ಮತದಾರರೇ ಅಧಿಕಾರದಿಂದ ಕೆಳಗಿಳಿಸಿರುವ ಪ್ರಕರಣ ಇಂಗ್ಲೆಂಡ್ನಿಂದ ವರದಿಯಾಗಿದೆ (ಪ್ರ.ವಾ., ಮೇ 3). ಸರ್ಕಾರದ ಕಾರ್ಯದಕ್ಷತೆ ಹೆಚ್ಚಿಸಲು ಇಂತಹ ದಿಟ್ಟ ಕ್ರಮಗಳು ಅತ್ಯಗತ್ಯ.</p>.<p>ಭಾರತದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಯಲ್ಲಿ ಕಣದಲ್ಲಿರುವ ಸುಮಾರು ಶೇ 50ರಷ್ಟು ಮಂದಿ ಅಪರಾಧ ಹಿನ್ನೆಲೆಯುಳ್ಳವರು ಎಂದು ಅಂಕಿ-ಅಂಶಗಳು ತಿಳಿಸುತ್ತವೆ.</p>.<p>ಇಂತಹವರಿಂದ ಎಂತಹ ಆಡಳಿತ ನಿರೀಕ್ಷಿಸಲು ಸಾಧ್ಯ? ಪ್ರಪಂಚಕ್ಕೇ ಮಾದರಿಯಾಗಿರುವ ಭಾರತದ ಸಂವಿಧಾನದಲ್ಲಿ ಜನಪ್ರತಿನಿಧಿಗಳನ್ನು ಹಿಂದಕ್ಕೆ ಕರೆಸಿಕೊಳ್ಳುವ ವಿಧಿಯೊಂದನ್ನು ಸೇರಿಸಿದರೆ, ರಾಜಕಾರಣದಲ್ಲಿ ಅಪರಾಧಿಗಳ ಸಂಖ್ಯೆ ಕಡಿಮೆಯಾದೀತು.</p>.<p>‘ಐದು ವರ್ಷ ನನ್ನನ್ನು ಕೇಳುವವರು ಯಾರೂ ಇಲ್ಲ’ ಎಂದು ತಿಳಿದು ಉದ್ಧಟತನ ತೋರುವ ಜನಪ್ರತಿನಿಧಿಗಳು ಇಂಥ ನಿಷ್ಠುರ ಕ್ರಮಗಳಿಂದ ಸರಿದಾರಿಗೆ ಬಂದಾರು.</p>.<p><em><strong>ಆನಂದ ಎನ್.ಎಲ್.,ಅಜ್ಜಂಪುರ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅಪರಾಧ ಹಿನ್ನೆಲೆಯ ಸಂಸದೆಯೊಬ್ಬರನ್ನು ಮತದಾರರೇ ಅಧಿಕಾರದಿಂದ ಕೆಳಗಿಳಿಸಿರುವ ಪ್ರಕರಣ ಇಂಗ್ಲೆಂಡ್ನಿಂದ ವರದಿಯಾಗಿದೆ (ಪ್ರ.ವಾ., ಮೇ 3). ಸರ್ಕಾರದ ಕಾರ್ಯದಕ್ಷತೆ ಹೆಚ್ಚಿಸಲು ಇಂತಹ ದಿಟ್ಟ ಕ್ರಮಗಳು ಅತ್ಯಗತ್ಯ.</p>.<p>ಭಾರತದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಯಲ್ಲಿ ಕಣದಲ್ಲಿರುವ ಸುಮಾರು ಶೇ 50ರಷ್ಟು ಮಂದಿ ಅಪರಾಧ ಹಿನ್ನೆಲೆಯುಳ್ಳವರು ಎಂದು ಅಂಕಿ-ಅಂಶಗಳು ತಿಳಿಸುತ್ತವೆ.</p>.<p>ಇಂತಹವರಿಂದ ಎಂತಹ ಆಡಳಿತ ನಿರೀಕ್ಷಿಸಲು ಸಾಧ್ಯ? ಪ್ರಪಂಚಕ್ಕೇ ಮಾದರಿಯಾಗಿರುವ ಭಾರತದ ಸಂವಿಧಾನದಲ್ಲಿ ಜನಪ್ರತಿನಿಧಿಗಳನ್ನು ಹಿಂದಕ್ಕೆ ಕರೆಸಿಕೊಳ್ಳುವ ವಿಧಿಯೊಂದನ್ನು ಸೇರಿಸಿದರೆ, ರಾಜಕಾರಣದಲ್ಲಿ ಅಪರಾಧಿಗಳ ಸಂಖ್ಯೆ ಕಡಿಮೆಯಾದೀತು.</p>.<p>‘ಐದು ವರ್ಷ ನನ್ನನ್ನು ಕೇಳುವವರು ಯಾರೂ ಇಲ್ಲ’ ಎಂದು ತಿಳಿದು ಉದ್ಧಟತನ ತೋರುವ ಜನಪ್ರತಿನಿಧಿಗಳು ಇಂಥ ನಿಷ್ಠುರ ಕ್ರಮಗಳಿಂದ ಸರಿದಾರಿಗೆ ಬಂದಾರು.</p>.<p><em><strong>ಆನಂದ ಎನ್.ಎಲ್.,ಅಜ್ಜಂಪುರ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>