ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಶ್ವತ ಪರಿಹಾರ ರೂಪಿಸಿ

Last Updated 7 ಜುಲೈ 2020, 19:30 IST
ಅಕ್ಷರ ಗಾತ್ರ

ಸಿಬ್ಬಂದಿಗೆ ಸಂಬಳ ಕೊಡಲು ಖಾಸಗಿ ಶಾಲೆಗಳಿಗೆ ಸಾಧ್ಯವಾಗುವುದಿಲ್ಲ ಎಂದಾದರೆ, ಈ ಶಾಲೆಗಳನ್ನು ಸರ್ಕಾರ ತನ್ನ ವಶಕ್ಕೆ ಪಡೆದು, ಅನುದಾನಿತ ಶಾಲೆಗಳಾಗಿ ಪರಿವರ್ತಿಸುವುದು ಸೂಕ್ತ. ಇದರಿಂದ ಖಾಸಗಿ ಶಾಲೆಗಳ ಡೊನೇಷನ್ ಹಾವಳಿ ತಪ್ಪುತ್ತದೆ, ಇಂಗ್ಲಿಷ್, ಕನ್ನಡ ಎಂಬ ತಾರತಮ್ಯ ನಿಲ್ಲುತ್ತದೆ.

ಚೀನಾದಲ್ಲಿ ಇರುವಂತೆ 1ರಿಂದ 12ನೇ ತರಗತಿಯವರೆಗೆ ಸರ್ಕಾರಿ ಶಾಲೆಗಳಲ್ಲಿ ಬಡವ, ಶ್ರೀಮಂತ ಎಂಬ ತಾರತಮ್ಯವಿಲ್ಲದೆ ನಮ್ಮ ದೇಶದಲ್ಲೂ ಏಕರೂಪದ ಶಿಕ್ಷಣ ಪಡೆಯಬಹುದು. ಪ್ರಸ್ತುತ ಖಾಸಗಿ ಶಾಲೆ ಶಿಕ್ಷಕರಿಗೆ ಸರ್ಕಾರಿ ಶಾಲೆಯ ಶಿಕ್ಷಕರು ಒಂದೆರಡು ದಿನದ ಸಂಬಳ ನೀಡುವುದರಿಂದ ಅವರ ಸಮಸ್ಯೆ ಬಗೆಹರಿಯುವುದಿಲ್ಲ. ಅದರ ಬದಲಾಗಿ, ಗಂಭೀರವಾಗಿ ಚಿಂತನೆ ನಡೆಸಿ ಈ ಸಮಸ್ಯೆಗೆ ಶಾಶ್ವತ ಪರಿಹಾರ ರೂಪಿಸಬೇಕು.

- ಜಿ.ಪಳನಿಸ್ವಾಮಿ ಜಾಗೇರಿ,ಕೊಳ್ಳೇಗಾಲ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT