ವಲಸೆ ಬಂದ ಕಾರ್ಮಿಕರು ನಿರುದ್ಯೋಗಿಗಳ ಪಡೆಯಲ್ಲಿ ಸೇರದಿರಲು ಅವರಿಗೆ ಕೌಶಲ ತರಬೇತಿ ನೀಡಿದರೆ ಉತ್ತಮ. ಸ್ಥಳೀಯ ಕೆಲಸಗಳಿಗೆ ಒತ್ತು ನೀಡಬೇಕು. ಕೃಷಿ ರಂಗದ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಬೇಕು. ರಸ್ತೆ ನಿರ್ಮಾಣ, ಕೆರೆಗಳ ಹೂಳೆತ್ತುವುದು, ವಿದ್ಯುತ್ ಸೌಲಭ್ಯ, ಒಳಚರಂಡಿ, ಕುಡಿಯುವ ನೀರು, ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಇತ್ಯಾದಿಗಳಿಗೆ ಅವಶ್ಯಕ ತರಬೇತಿ ನೀಡಬೇಕು. ಪಡಿತರ ವ್ಯವಸ್ಥೆಯ ಮೂಲಕ ಮೂಲ ಅವಶ್ಯಕತೆಗಳನ್ನು ಪೂರೈಸುವ ವ್ಯವಸ್ಥೆ ಮುಂದುವರಿಯಬೇಕು.