ಮಂಡ್ಯ ಜಿಲ್ಲೆಯ ಬೆಲ್ಲಕ್ಕೆ ಅದರದೇ ಆದ ಮಹತ್ವವಿದೆ. ಜಿಲ್ಲೆಯಲ್ಲಿ ಅತಿ ಹೆಚ್ಚು ಕಬ್ಬು ಬೆಳೆಯುವ ರೈತರು ಇರುವುದರಿಂದ ಸುಮಾರು ಹತ್ತು ವರ್ಷಗಳ ಹಿಂದೆ ಪ್ರತೀ ಹಳ್ಳಿಯಲ್ಲೂ ಆಲೆಮನೆ ಅಥವಾ ಗಾಣಗಳಲ್ಲಿ ರೈತರು ಉತ್ತಮ ಗುಣಮಟ್ಟದ ಬೆಲ್ಲವನ್ನು ಉತ್ಪಾದಿಸುತ್ತಿದ್ದರು. ಒಂದು ಕಾಲದಲ್ಲಿ ಮಂಡ್ಯ ಜಿಲ್ಲೆಯ ಬೆಲ್ಲಕ್ಕೆ ತುಂಬಾ ಬೇಡಿಕೆಯಿತ್ತು. ಗುಜರಾತ್, ಮಹಾರಾಷ್ಟ್ರ, ಕೇರಳ ಮುಂತಾದ ರಾಜ್ಯಗಳಿಗೆ ಜಿಲ್ಲೆಯಿಂದ ಬೆಲ್ಲ ಹೋಗುತ್ತಿತ್ತು.