ಮಂಡ್ಯ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಸುಮಲತಾ ಅಂಬರೀಶ್ ಅವರು ಹೆಜ್ಜಾಲ- ಚಾಮರಾಜನಗರ ನಡುವಿನ ರೈಲು ಸಂಚಾರ ಕಾಮಗಾರಿಯ ವಿಚಾರವನ್ನು ಲೋಕಸಭೆಯಲ್ಲಿ ಪ್ರಸ್ತಾಪಿಸಿರುವುದು ಸಂತಸದಾಯಕ. ಹೆಜ್ಜಾಲ, ಕನಕಪುರ, ಮಳವಳ್ಳಿ, ಕೊಳ್ಳೇಗಾಲ ಮೂಲಕ ಚಾಮರಾಜನಗರ ನಡುವೆ ರೈಲು ಸಂಪರ್ಕ ಕಲ್ಪಿಸುವ ಪ್ರಸ್ತಾವವು 1996-97ರಲ್ಲಿಯೇ ಇತ್ತು. ಆದರೆ, ಇಂದಿಗೂ ಕಾಮಗಾರಿ ಆರಂಭವೇ ಆಗಿಲ್ಲದಿರುವುದು ವಿಪರ್ಯಾಸ. ಈ ಯೋಜನೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಲಾ ಶೇ 50ರಷ್ಟು ಹಣವನ್ನು ವಿನಿಯೋಗಿಸಬೇಕಿದೆ. ಕೇಂದ್ರ ಮತ್ತು ರಾಜ್ಯದಲ್ಲಿ ಈಗ ಒಂದೇ ಪಕ್ಷ ಅಧಿಕಾರದಲ್ಲಿ ಇದೆ. ಹಣ ಭರಿಸುವ ವಿಚಾರದಲ್ಲಿ ಸಹಮತ ಸಾಧಿಸಿ, ಆದಷ್ಟು ಬೇಗ ಕಾಮಗಾರಿ ಆರಂಭಿಸಲು ಮುಂದಾದರೆ, ಇಲ್ಲಿನ ಜನರ ಎಷ್ಟೋ ವರ್ಷಗಳ ಬೇಡಿಕೆಯನ್ನು ಈಡೇರಿಸಿದಂತಾಗುತ್ತದೆ.