ದಿನದಿಂದ ದಿನಕ್ಕೆ ಏರುತ್ತಿರುವ ಕೊರೊನಾ ಸೋಂಕಿನ ಪ್ರಕರಣಗಳಿಂದ ಜನಸಾಮಾನ್ಯರು ಕಂಗಾಲಾಗಿದ್ದಾರೆ. ಇಂತಹ ಸಂದರ್ಭದಲ್ಲಿ, ರಾಜ್ಯದ ಹಿರಿಯ ಸಚಿವ ಕೆ.ಎಸ್.ಈಶ್ವರಪ್ಪ ಅವರು ಕಾಶಿ, ಮಥುರಾದಲ್ಲಿಯೂ ಮಸೀದಿಗಳನ್ನು ತೆರವುಗೊಳಿಸಿ ಮಂದಿರ ಕಟ್ಟಬೇಕೆಂಬ ಪ್ರಚೋದನಕಾರಿ ಹೇಳಿಕೆ ನೀಡಿ, ಮೂಲಭೂತವಾದಿ ಶಕ್ತಿಗಳನ್ನು ಕೆರಳಿಸುವ ಕೃತ್ಯಕ್ಕೆ ಇಳಿದಿದ್ದಾರೆ. ಅವರ ಹೇಳಿಕೆ ಖಂಡನೀಯ.