ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಮಾರಕಗಳು ಉಳಿಯಲಿ

Last Updated 11 ಅಕ್ಟೋಬರ್ 2018, 20:15 IST
ಅಕ್ಷರ ಗಾತ್ರ

‘ವಾಸ್ತುಶಿಲ್ಪದ ತೊಟ್ಟಿಲು’ ಎಂದೇ ಪ್ರಸಿದ್ಧಿ ಪಡೆದಿರುವ ಚಾಲುಕ್ಯರ ಕಾಲದ ಐಹೊಳೆಯ ಸ್ಮಾರಕವನ್ನು ಕಳೆದ ವರ್ಷ ನೋಡಲು ಹೋಗಿದ್ದಾಗ, ಮನಸ್ಸಿಗೆ ತುಂಬಾ ನೋವಾಗಿತ್ತು. ಕಾರಣ, ಸ್ಮಾರಕದ ಆವರಣದಲ್ಲಿ ಎಮ್ಮೆ, ದನ-ಕರು, ಕುರಿ-ಕೋಳಿ, ತಿಪ್ಪೆ, ಕೊಳಕು ತುಂಬಿ ತುಳುಕುತ್ತಿತ್ತು.

ಈಗ ಆ ಸ್ಮಾರಕದ ಸಂರಕ್ಷಣೆಗಾಗಿ ಅಲ್ಲಿನ ಜನವಸತಿಯನ್ನು ಸ್ಥಳಾಂತರಿಸಲು ಕ್ರಮ ಕೈಗೊಂಡಿರುವುದಾಗಿ ವರದಿಯಾಗಿದೆ (ಪ್ರ.ವಾ., ಅ. 10). ಇದು ಸಮಾಧಾನದ ಸಂಗತಿ. ಆದಷ್ಟು ಬೇಗ ಈ ಕೆಲಸ ಪೂರ್ಣಗೊಳ್ಳಬೇಕು.

ಇದೊಂದೇ ಅಲ್ಲ, ಬಹುತೇಕ ಎಲ್ಲಾ ಕಡೆ ಐತಿಹಾಸಿಕ ಸ್ಮಾರಕಗಳ ಜಾಗ ಅತಿಕ್ರಮಣಕ್ಕೆ ಒಳಗಾಗಿದೆ. ಇಂಥ ಒತ್ತುವರಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು. ಜೊತೆಗೆ ಇಂಥ ಪ್ರದೇಶಗಳಿಗೆ ಹೋಗುವ ರಸ್ತೆಯನ್ನು ದುರಸ್ತಿಪಡಿಸುವ, ಅಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲೂ ಕೆಲಸಗಳಾಗಬೇಕು.

ಕೆ.ಸಿ. ರತ್ನಶ್ರೀ ಶ್ರೀಧರ್, ಬೆಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT